“ಸ್ಯಾಂಕಿ ಕೆರೆ ಉಳಿಸಿ! ಸುರಂಗ ಮಾರ್ಗ ಯೋಜನೆಗೆ ವಿರೋಧ — ಅಶೋಕ್ ನೇತೃತ್ವದಲ್ಲಿ BJP ಭಾರೀ ಪ್ರತಿಭಟನೆ”.

 “ಸ್ಯಾಂಕಿ ಕೆರೆ ಉಳಿಸಿ! ಸುರಂಗ ಮಾರ್ಗ ಯೋಜನೆಗೆ ವಿರೋಧ — ಅಶೋಕ್ ನೇತೃತ್ವದಲ್ಲಿ BJP ಭಾರೀ ಪ್ರತಿಭಟನೆ”.

ಬೆಂಗಳೂರು: ಸ್ಯಾಂಕಿ ಕೆರೆ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಹಕ್ಕೊತ್ತಾಯದೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಭಾರಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರದ ಬೆಂಗಳೂರು ಸುರಂಗ ಮಾರ್ಗ ಯೋಜನೆಯ ವಿರುದ್ಧ ಈ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ಉದ್ದೇಶಿತ ಸುರಂಗ ರಸ್ತೆ ಯೋಜನೆಯು ಐತಿಹಾಸಿಕ ಸ್ಯಾಂಕಿ ಕೆರೆಗೆ ಹಾನಿ ಮಾಡಬಹುದು ಎಂಬ ಆತಂಕವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದ್ದಾರೆ.

ಸುರಂಗ ರಸ್ತೆಯ ನಿರ್ಮಾಣದಿಂದ ಬೆಂಗಳೂರಿನ ಜೀವನಾಡಿಯಾಗಿರುವ ಸ್ಯಾಂಕಿ ಕೆರೆಯ ಅಸ್ತಿತ್ವಕ್ಕೆ ಅಪಾಯ ಬರಲಿದೆ. ರಾಜ್ಯ ಸರ್ಕಾರವು ಈ ಯೋಜನೆಯನ್ನು ಕೈಬಿಡಬೇಕು ಮತ್ತು ಕೆರೆಯ ಪರಿಸರ ಸಮತೋಲನವನ್ನು ಕಾಪಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *