RSS ಹಿರಿಯ ಪ್ರಚಾರಕ ಮದನ್ ದಾಸ್ ದೇವಿ ನಿಧನ..!

ಬೆಂಗಳೂರು: RSS ಹಿರಿಯ ಪ್ರಚಾರಕ ಮದನ್ ದಾಸ್ ದೇವಿ (81 ವರ್ಷ ವಯಸ್ಸು) ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮದನ್ ದಾಸ್ ದೇವಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

RSS

ಇಂದು ಮಧ್ಯಾಹ್ನ 1.30ರಿಂದ 4ರ ತನಕ ಬೆಂಗಳೂರಿನ RSS ಕಾರ್ಯಾಲಯ ಕೇಶವ ಕೃಪಾದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳವಾರ ಮಹಾರಾಷ್ಟ್ರದ ಪುಣೆಯಲ್ಲಿ ಅಂತ್ಯಕ್ರಿಯೆ ಜರುಗಲಿದೆ. ಜ್ಯೇಷ್ಠ ಪ್ರಚಾರಕರಾಗಿದ್ದ ಮದನ್ ದಾಸ್ ದೇವಿ, ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹರಾಗಿ ಕಾರ್ಯನಿರ್ವಹಿಸಿದ್ದರು.

RSS ಪ್ರಚಾರಕರು ಮತ್ತು ಹಿಂದಿನ ಸಹಸರಕಾರ್ಯವಾಹರಾದ ಮದನ್ ದಾಸ್ ದೇವಿ ಅವರ ನಿಧನಕ್ಕೆ RSS ಸರಸಂಘಚಾಲಕ ಮೋಹನ್ ಭಾಗವತ್ ಮತ್ತು ಸಹಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ. ಸಂಘದ ಕಾರ್ಯಚಟುವಟಿಕೆಗಳನ್ನು ನಿಭಾಯಿಸಿದ ಕ್ಷಣಗಳನ್ನು ಅವರು ಸ್ಮರಿಸಿದ್ದಾರೆ.RSS ಪ್ರಚಾರಕರು ಮತ್ತು ಹಿಂದಿನ ಸಹಸರಕಾರ್ಯವಾಹರಾದ ಮದನ್ ದಾಸ್ ದೇವಿ ಅವರ ನಿಧನ ಆಘಾತಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆಗಿಯೂ ನಿಸ್ವಾರ್ಥ ಸೇವೆ ಸಲ್ಲಿಸಿದ್ದರು. ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ. ದೇವರು ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *