ಸಿದ್ದರಾಮಯ್ಯ: “ರಾಜಕೀಯ ಶಾಶ್ವತವಲ್ಲ, ತಲೆ ಕೆಡಿಸಿಕೊಳ್ಳಲ್ಲ”.

ಸಿದ್ದರಾಮಯ್ಯ: “ರಾಜಕೀಯ ಶಾಶ್ವತವಲ್ಲ, ತಲೆ ಕೆಡಿಸಿಕೊಳ್ಳಲ್ಲ”.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರ ತಣ್ಣಗಾಗಿಸುವ ನಿಟ್ಟಿನಲ್ಲಿ ನಡೆದಿದ್ದ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ವೈರಾಗ್ಯದ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಉಭಯ ನಾಯಕರು ಒಗ್ಗಟ್ಟಿನ ಸಂದೇಶ ನೀಡಿದ್ದರು. ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ, ನಾವೆಲ್ಲಾ ಒಂದು ಎಂದು ಸ್ಪಷ್ಟಪಡಿಸಿ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಕುರಿತ ಪ್ರಶ್ನೆಗೆ ಹೈಕಮಾಂಡ್ ಕಡೆ ಕೈ ತೋರಿಸಿದ್ದರು. ಈ ಮೂಲಕ ಪಕ್ಷದೊಳಗೆ ಸಾಮರಸ್ಯ ಕಾಪಾಡುವ ಪ್ರಯತ್ನ ಮಾಡಲಾಗಿತ್ತು.

ಬೆಳಗ್ಗೆ ಒಗ್ಗಟ್ಟು, ಮಧ್ಯಾಹ್ನ ವೈರಾಗ್ಯದ ಮಾತು!

ಬೆಳಗ್ಗೆ ಒಗ್ಗಟ್ಟು ಪ್ರದರ್ಶಿಸಿ ಒಮ್ಮತದ ಮಾತುಗಳನ್ನಾಡಿದ್ದ ಸಿದ್ದರಾಮಯ್ಯ, ಮಧ್ಯಾಹ್ನ ವೈರಾಗ್ಯದ ಮಾತುಗಳನ್ನು ಆಡಿದ್ದಾರೆ. ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ವೇಳೆ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿಎಂ ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ರಾಜಕೀಯ ಶಾಶ್ವತ ಅಲ್ಲ, ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ, ರಾಜಕೀಯ ನಮ್ಮಪ್ಪನ ಆಸ್ತಿನಾ, ಏನಾಗುತ್ತೋ ಆಗ್ಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಅನಿರೀಕ್ಷಿತ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕೆಲವರು ಇದನ್ನು ಸಿದ್ದರಾಮಯ್ಯ ಅವರ ವೈರಾಗ್ಯದ ಮಾತು ಎಂದು ವಿಶ್ಲೇಷಿಸಿದರೆ, ಮತ್ತೆ ಕೆಲವರು ಅಧಿಕಾರ ಹಂಚಿಕೆ ಕುಸ್ತಿ ಹಾಗೂ ಹೈಕಮಾಂಡ್‌ನ ಸಭೆಗಳ ನಡುವೆ ರಾಜಕೀಯ ಒತ್ತಡವನ್ನು ನಿಭಾಯಿಸುವ ಒಂದು ತಂತ್ರವೆಂದು ಅಭಿಪ್ರಾಯಪಟ್ಟಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *