ಹೆಸರು ಬದಲಿಸಿ ಯುವಕರನ್ನು ಸೆಳೆದಿದ್ದ ಶಾಕಿಂಗ್ ಸತ್ಯ.!
ಕಾರವಾರ: ಜ್ಯೋತಿಷಿ ಕಮಲಾಕರ ಭಟ್ ಜತೆ ಅಕ್ರಮ ಸಂಬಂಧಕ್ಕಾಗಿ ಕೊಲೆ ಮಾಡಿಸಿದ ಪ್ರಕರಣದಲ್ಲಿ ಜೈಲುಪಾಲಾಗಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮೂಲದ ಸುಚಿತ್ರಾ ಕುರಿತು ಮತ್ತೊಂದು ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಪಡ್ಡೆ ಹುಡುಗರನ್ನು ಬಲೆಗೆ ಬೀಳಿಸಲು ಸುಚಿತ್ರಾ ಮಾಸ್ಟರ್ ಪ್ಲಾನ್ ರೂಪಿಸಿಕೊಂಡಿದ್ದಳು ಎಂಬುದು ತನಿಖೆಯಲ್ಲಿ ಬಹಿರಂಗವಾಗಿರುವುದು ಮೂಲಗಳಿಂದ ತಿಳಿದುಬಂದಿದೆ. ಮದುವೆ ಪ್ರಮಾಣಪತ್ರದ ಪ್ರಕಾರ ಸುಚಿತ್ರಾಳ ನಿಜವಾದ ಹೆಸರು ಸುರೇಖಾ! ಆದರೆ ಯುವಕರನ್ನು ಸೆಳೆಯಲು ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹೆಸರನ್ನೇ ಬದಲಿಸಿ ‘ಸುಚಿತ್ರಾ’ ಎಂದು ಪರಿಚಯಿಸಿಕೊಳ್ಳುತ್ತಿದ್ದಳು ಎಂಬುದು ತಿಳಿದುಬಂದಿದೆ.
‘ಸುರೇಖಾ ಎಂಬಾಕೆ ನನ್ನ ಅಕ್ಕ. ನಾವು ಟ್ವಿನ್ಸ್, ಅಕ್ಕ ಸಾವನ್ನಪ್ಪಿದ ಬಳಿಕ ಮಕ್ಕಳನ್ನು ನಾನು ನೋಡಿಕೊಳ್ಳುತ್ತಿದ್ದೇನೆ, ನನಗೆ ಮದುವೆಯಾಗಿಲ್ಲ’ ಎಂಬ ಕಥೆ ಹೇಳಿ ಹುಡುಗರನ್ನು ಸೆಳೆಯುತ್ತಿದ್ದಳು ಎನ್ನಲಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಚೆಂದದ ಹುಡುಗರಿಗೆ ಗಾಳ
ಸಾಮಾಜಿಕ ಜಾಲತಾಣಗಳ ಮೂಲಕವೇ ಪಡ್ಡೆ ಹುಡುಗರನ್ನು ಸಂಪರ್ಕಿಸುವುದು ಸುಚಿತ್ರಾಳ ಮುಖ್ಯ ತಂತ್ರವಾಗಿತ್ತು. ಮೊದಲಿಗೆ ಚೆಂದದ ಯುವಕರ ಫೋಟೋಗಳಿಗೆ ಕಾಮೆಂಟ್ ಮಾಡುವುದು, ನಂತರ ಮೆಸೆಂಜರ್ನಲ್ಲಿ ಸ್ನೇಹ ಬೆಳೆಸುವುದು, ಎರಡು-ಮೂರು ತಿಂಗಳು ಚಾಟಿಂಗ್ ನಡೆಸುತ್ತಾ ಅವರ ವೈಯಕ್ತಿಕ ಹಾಗೂ ಆರ್ಥಿಕ ಹಿನ್ನೆಲೆ ಬಗ್ಗೆ ಮಾಹಿತಿ ಸಂಗ್ರಹಿಸುವುದನ್ನು ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಹುಡುಗರನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಸುಚಿತ್ರಾ
ಹುಡುಗರ ಜತೆ ಚಾಟಿಂಗ್ ಮಾಡಿ ಸಲುಗೆ ಬೆಳೆಯುತ್ತಿದ್ದಂತೆಯೇ ‘‘ಭೇಟಿಯಾಗೋಣ’’ ಎಂದು ಕರೆಸಿಕೊಂಡು ಆಪ್ತವಾಗುತ್ತಿದ್ದಳು. ಕೊನೆಗೆ ಆ ಹುಡುಗರನ್ನು ಮನೆಗೆ ಕರೆಯುತ್ತಿದ್ದಳು. ಈ ರೀತಿ ಹಲವರನ್ನು ತನ್ನ ಬಲೆಗೆ ಬೀಳಿಸಲು ಸುಚಿತ್ರಾ ಮಸ್ಟರ್ ಪ್ಲಾನ್ ಮಾಡಿಕೊಂಡಿದ್ದಾಳೆ ಎಂಬುದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಕಮಲಾಕರ್ ಭಟ್ ಮಾತ್ರವಲ್ಲದೆ ಕಲಬುರಗಿಯ ಜಮೀನ್ದಾರನ ಜೊತೆಗೂ ಸುಚಿತ್ರಾ ಲವ್ವಿಡವ್ವಿ ನಡೆದಿತ್ತು ಎಂಬುದು ಭಾನುವಾರ ಬಯಲಾಗಿತ್ತು. ಸುಚಿತ್ರಾ ಮೊಬೈಲ್ ಫೋನ್ ಪರಿಶೀಲನೆಗೆ ಒಳಪಡಿಸಿದ ಪೊಲೀಸರಿಗೆ ಹಲವು ಸ್ಫೋಟಕ ಮಾಹಿತಿಗಳು ತಿಳಿದುಬಂದಿದ್ದವು. ಇದೀಗ ಆಕೆ ಹುಡುಗರನ್ನು ಬುಟ್ಟಿಗೆ ಬೀಳಿಸಿಕೊಳ್ಳುತ್ತಿದ್ದುದು ಹೇಗೆ ಎಂಬುದೂ ಬಯಲಾಗಿದೆ.
For More Updates Join our WhatsApp Group :




