ಸುಜಾತಾ ಭಟ್ ತಪ್ಪೊಪ್ಪಿಗೆ, SIT ತನಿಖೆ ಮುಕ್ತಾಯ ಘೋಷಣೆ!

ಸುಜಾತಾ ಭಟ್ ತಪ್ಪೊಪ್ಪಿಗೆ, SIT ತನಿಖೆ ಮುಕ್ತಾಯ ಘೋಷಣೆ!

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಅನನ್ಯಾ ಭಟ್ ನಾಪತ್ತೆ ಕೇಸ್​​ನ​ ತನಿಖೆಯನ್ನ ಎಸ್​ಐಟಿ ಅಂತ್ಯಗೊಳಿಸಿದೆ. ಮಗಳು ಧರ್ಮಸ್ಥಳದಲ್ಲಿ ಕಾಣೆ ಆಗಿದ್ದಾಳೆ ಎಂದು ಸುಜಾತಾ ಭಟ್​ ದೂರು ನೀಡಿದ್ದರು. ಆದರೆ ತನಿಖೆ ವೇಳೆ ತಾನು ಸುಳ್ಳು ದೂರು ನೀಡಿದ್ದಾಗಿ ಅವರು ತಪ್ಪೊಪ್ಪಿಕೊಂಡಿರುವ ಹಿನ್ನಲೆ ತನಿಖೆ ಅಂತ್ಯಗೊಳಿಸಲಾಗಿದೆ. ಪ್ರಕರಣ ಸಂಬಂಧ ಸುಜಾತಾ ಭಟ್​​ ಅವರ ದೂರು ಅರ್ಜಿ ವಿಲೆ ಮಾಡಲಾಗಿರುತ್ತೆಂದು ಎಸ್​ಐಟಿ ಅಧಿಕಾರಿಗಳು ಹಿಂಬರಹ ನೀಡಿದ್ದಾರೆ.

ಪ್ರಕರಣ ಏನಾಗಿತ್ತು?

ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಹೆಣ ಹೂಳಲಾಗಿದೆ ಎಂದು ಅನಾಮಧೇಯ ವ್ಯಕ್ತಿಯೋರ್ವ ಮಾಡಿದ್ದ ಆರೋಪ ದೇಶಾದ್ಯಂತ ಬಿರುಗಾಳಿ ಎಬ್ಬಿಸಿತ್ತು. ಈ ಸಂದರ್ಭದಲ್ಲಿ ಪ್ರತ್ಯಕ್ಷವಾಗಿದ್ದ ಸುಜಾತಾ ಭಟ್​ ಎಂಬವರು ತನ್ನ ಮಗಳು ಮಗಳು ಧರ್ಮಸ್ಥಳದಲ್ಲಿ ಕಾಣೆ ಆಗಿದ್ದಾಳೆ ಎಂದು ದೂರು ನೀಡಿದ್ದರು. 2003ರಲ್ಲಿ ಮಣಿಪಾಲದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದಾಗ ತನ್ನ ಮಗಳು ನಾಪತ್ತೆಯಾಗಿದ್ದು, ಆಕೆಯನ್ನು ಧರ್ಮಸ್ಥಳದಲ್ಲಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಪ್ರಕರಣ ಗಂಭೀರತೆ ಪಡೆದುಕೊಂಡ ಕಾರಣ, ಇದರ ತನಿಖೆಯನ್ನ ಎಸ್​ಐಟಿಗೆ ಸರ್ಕಾರ ಹಸ್ತಾಂತರಿಸಿತ್ತು.

ದಿನಕ್ಕೊಂದು ಕತೆ ಹೇಳಿದ್ದ ಸುಜಾತಾ ಭಟ್​

ತನಿಖೆ ವೇಳೆ ಸುಜಾತಾ ಭಟ್​ ದಿನಕ್ಕೊಂದು ಕತೆ ಹೇಳಿದ್ದು, ಯಾರದ್ದೋ ಫೋಟೋ ತೋರಿಸಿ ಇವಳೇ ನನ್ನ ಮಗಳು ಅನನ್ಯಾ ಭಟ್​ ಎಂದು ಆರಂಭದಲ್ಲಿ ಹೇಳಿದ್ದರು. ಆದರೆ ಅದು ಅವರ ಮಗಳ ಫೋಟೋವಲ್ಲ, ಬದಲಾಗಿ ವಾಸಂತಿ ಎಂಬವರ ಫೋಟೋ ಎಂಬ ವಿಷಯ ರಿವೀಲ್​ ಆಗಿತ್ತು. ಆ ಬಳಿಕ ತಮ್ಮ ಹೇಳಿಕೆ ಬದಲಾಯಿಸಿದ್ದ ಸುಜಾತಾ ಭಟ್​ ಆಕೆ ತನ್ನ ಸ್ನೇಹಿತರ ಮಗಳು ಎಂದು ಹೇಳಿಕೊಂಡಿದ್ದರು. ಸೋಮೆಶ್ವರದ ಅರವಿಂದ್​ ಮತ್ತು ವಿಮಲಾ ದಂಪತಿ ಮಗಳು ಎಂದು ತಿಳಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *