ರಾಜಕೀಯ ಪಕ್ಷಗಳು ನೀಡುವ ಉಚಿತ ಕೊಡುಗೆಗಳು ದೇಶದ ಹಣಕಾಸಿಗೆ ಹಾನಿ.
ನವದೆಹಲಿ : ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ.
ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಬಹುದು, ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಹಲವಾರು ಶಿಫಾರಸುಗಳನ್ನು ಸಹ ನೀಡಿದೆ. ತಮಿಳುನಾಡು ವಿದ್ಯುತ್ ಮಂಡಳಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ತಮಿಳುನಾಡು ವಿದ್ಯುತ್ ಮಂಡಳಿಯು ಗ್ರಾಹಕರಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡುತ್ತಾ ಬಂದಿದೆ. ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್, ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ಉಚಿತ ಗ್ಯಾರಂಟಿ ಸಂಸ್ಕೃತಿಯು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದು ಹೇಳಿದೆ.
ನ್ಯಾಯಾಲಯಹೇಳಿದ್ದೇನು? ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಇತರ ನ್ಯಾಯಮೂರ್ತಿಗಳನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ಹೆಚ್ಚಿನ ರಾಜ್ಯಗಳು ಈಗಾಗಲೇ ನಷ್ಟದಲ್ಲಿವೆ, ಆದರೆ ಅವು ಅಭಿವೃದ್ಧಿಗೆ ಬದಲಾಗಿ ಉಚಿತ ಸೌಲಭ್ಯಗಳನ್ನು ನೀಡುತ್ತಿವೆ ಎಂದು ಬಲವಾದ ಟೀಕೆ ಮಾಡಿತು. ಪಾವತಿಸಲು ಸಾಧ್ಯವಾಗದವರಿಗೆ ನೆರವು ನೀಡುವುದು ಅರ್ಥವಾಗುವಂತಹದ್ದಾಗಿದೆ. ಆದರೆ ಶ್ರೀಮಂತ ಮತ್ತು ಬಡವರ ನಡುವೆ ವ್ಯತ್ಯಾಸವಿಲ್ಲದೆ ಎಲ್ಲರಿಗೂ ಉಚಿತ ವಸ್ತುಗಳನ್ನು ನೀಡುವುದು ತಪ್ಪು ನೀತಿ. .
For More Updates Join our WhatsApp Group :




