ಅವಕಾಶ ಸಿಕ್ಕು ಭಾರತದ ಗೆಲುವಿಗೆ ಚಾಲಕ, ಬ್ಯಾಟಿಂಗ್ ಲೈನ್ ಬದಲಾವಣೆ.
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಈ ಬಾರಿಯ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ವಿಶ್ವಕಪ್ ಆರಂಭವಾದ ಬಳಿಕ ಸ್ಯಾಮ್ಸನ್ ಬೆಂಚ್ನಲ್ಲಿದ್ದರು. ಆರಂಭಿಕನಾಗಿ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಂಡಿದ್ದರು.
ಅತ್ತ ಅಭಿಷೇಕ್ ಶರ್ಮಾ ಸತತವಾಗಿ ವಿಫಲರಾದರೂ ಸಂಜು ಸ್ಯಾಮ್ಸನ್ಗೆ ಚಾನ್ಸ್ ನೀಡಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ನ ಸೆಮಿಫೈನಲ್ಗೇರಿದೆ.
ಭಾರತ ತಂಡ ವಿಶ್ವಕಪ್ನ ಸೆಮಿಫೈನಲ್ಗೇರಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ಗೆ ಇಷ್ಟು ದಿನ ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಟ್ಟಿರುವುದೇಕೆ? ಎಂಬ ಪ್ರಶ್ನೆಯೊಂದು ಎದುರಾಗಿದೆ. ಈ ಪ್ರಶ್ನೆಗೆ ನಿರ್ದಿಷ್ಟ ಕಾರಣಗಳನ್ನು ಮುಂದಿಡುವ ಮೂಲಕ ಗಂಭೀರ್ ಉತ್ತರಿಸಿದ್ದಾರೆ.
ಸಂಜು ಸ್ಯಾಮ್ಸನ್ರನ್ನು ಹೊರಗಿಡಲು ಕಾರಣವೇನು?
ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಬೇಗನೆ ವಿಕೆಟ್ ಒಪ್ಪಿಸುತ್ತಿದ್ದರು. ಅವರು ಕಣಕ್ಕಿಳಿದ ಐದು ಇನಿಂಗ್ಸ್ಗಳಲ್ಲಿ ಕಲೆಹಾಕಿದ್ದು 10, 6, 0, 24, 6 ರನ್ ಮಾತ್ರ. ಅಂದರೆ ಅವರು ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದರು.
ಈ ಒತ್ತಡದ ಪರಿಸ್ಥಿತಿಯಿಂದ ಅವರನ್ನು ಹೊರತರಲು ಮತ್ತು ಮಾನಸಿಕವಾಗಿ ರಿಫ್ರೆಶ್ ಆಗಲು ವಿರಾಮ ನೀಡಬೇಕಿತ್ತು. ಹೀಗಾಗಿ ಟಿ20 ವಿಶ್ವಕಪ್ನ ಆರಂಭಿಕ ಪಂದ್ಯಗಳಿಗೆ ಸಂಜು ಸ್ಯಾಮ್ಸನ್ರನ್ನು ಪ್ಲೇಯಿಂಗ್ ಇಲೆವೆನ್ಗೆ ಆಯ್ಕೆ ಮಾಡಿರಲಿಲ್ಲ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
For More Updates Join our WhatsApp Group :



