ಬಸ್ ಇಲ್ಲದ ಬಿಸಿ ಜನರ ಜೇಬಿಗೆ ಹೊಡೆತ : ದಿಢೀರ್ ಆಟೋ ದರ ಏರಿಕೆ || KSRTC Strike Impact

ಇಂದಿನಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೈಕೋರ್ಟ್​​ ಒಂದು ದಿನದ ತಡೆಯಾಜ್ಞೆ ನಡುವೆಯೂ ಬಸ್​​ಗಳ ಸಂಚಾರದಲ್ಲಿ ಕೆಲ ಗೊಂದಲ ಇದ್ದು, ಸಂಪೂರ್ಣ ಬಸ್​ಗಳು ರಸ್ತೆಗಿಳಿದಿಲ್ಲ.  ಹೀಗಾಗಿ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ದಿಢೀರ್​ ಆಟೋ ದರ ಏರಿಕೆ ಮಾಡಿ, ಒಬ್ಬ ಪ್ರಯಾಣಿಕನಿದ್ದರೂ ಕೂಡ 300 ರೂ, 400 ರೂಗಳನ್ನು ವಸೂಲಿ ಮಾಡುತ್ತಿದ್ದಾರೆ. ಶಾಂತಿನಗರದಿಂದ ಜೀವನ್ ಭೀಮಾನಗರಕ್ಕೆ ತೆರಳಲು ಆಟೋ ಚಾಲಕರೊಬ್ಬರು ಒಬ್ಬ ಸಿಂಗಲ್ ಪ್ರಯಾಣಿಕನಿಂದ 350 ರೂಪಾಯಿಗಳನ್ನು ಡಿಮಾಂಡ್ ಮಾಡಿದ ಘಟನೆಯೊಂದು ಈ ಸಮಸ್ಯೆಯ ತೀವ್ರತೆಯನ್ನು ಎತ್ತಿ ತೋರಿಸಿದೆ. ಕೊನೆಗೆ, ಚರ್ಚೆಯ ಬಳಿಕ 250 ರೂಪಾಯಿಗಳಿಗೆ ಒಪ್ಪಿಕೊಂಡ ಚಾಲಕ, ಪ್ರಯಾಣಿಕನನ್ನು ಕರೆದೊಯ್ದಿದ್ದಾರೆ. ಇಲ್ಲಿ ಪ್ರಯಾಣಿಕ ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸಿದ್ದವರಾಗಿದ್ದು, ಸಾರಿಗೆ ಬಸ್‌ಗಳ ಸೇವೆ ಇಲ್ಲದಿರುವುದರಿಂದ ಆಟೋವನ್ನೇ ಆಶ್ರಯಿಸಬೇಕಾಗಿದೆ. ಆಟೋ ಚಾಲಕನು ದರ ಕೇಳಿದಾಗ ಪ್ರಯಾಣಿಕನಿಗೆ ಶಾಕ್​ ಆಗಿದ್ದು, ಕೊನೆಗೆ 250 ರೂಪಾಯಿಗಳನ್ನು ಪಾವತಿಸಿ ಪ್ರಯಾಣಿಸಿದ್ದಾರೆ. ಸಾಮಾನ್ಯವಾಗಿ, ಶಾಂತಿನಗರದಿಂದ ಜೀವನ್ ಭೀಮಾನಗರಕ್ಕೆ ಆಟೋ ದರ ಸುಮಾರು 100-150 ರೂಪಾಯಿಗಳಷ್ಟಿರುತ್ತದೆ. ಆದರೆ, ಮುಷ್ಕರದಿಂದಾಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಆಟೋ ಚಾಲಕರು ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ದರವನ್ನು ಗಗನಕ್ಕೇರಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೇರಿದಂತೆ ರಾಜ್ಯದ ಸಾರಿಗೆ ಘಟಕಗಳ ಸಿಬ್ಬಂದಿ, 38 ತಿಂಗಳ ವೇತನ ಬಾಕಿ, ವೇತನ ಪರಿಷ್ಕರಣೆ, ಮತ್ತು 2021ರ ಮುಷ್ಕರದ ಸಂದರ್ಭದಲ್ಲಿ ವಜಾಗೊಂಡ ನೌಕರರ ಮರುನೇಮಕಾತಿಗಾಗಿ ಈ ಹೋರಾಟಕ್ಕೆ ಕರೆ ನೀಡಿದ್ದಾರೆ. ಇದರಿಂದ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೆ ಭಾರೀ ಒತ್ತಡ ಉಂಟಾಗಿದ್ದು, ವಿಶೇಷವಾಗಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆಯುವ ಮಹಿಳೆಯರಿಗೆ ತೊಂದರೆಯಾಗಿದೆ.

Shivamogga || KSRTC ಬಸ್ ಹಾಗೂ ಟ್ರಕ್ ಡಿಕ್ಕಿ : ಹಲವು ಪ್ರಯಾಣಿಕರಿಗೆ ಗಾಯ..!

ಶಿವಮೊಗ್ಗ : KSRTC ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಾಗರ ತಾಲೂಕು ಆನಂದಪುರದ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,…

ರಾಯಚೂರು || ಕುರಿಗಳ ಮೇಲೆ ಹಾಯುವುದನ್ನು ತಪ್ಪಿಸಲು ಕೆಎಸ್ಅರ್ಟಿಸಿ ಬಸ್ಸನ್ನು ತಗ್ಗಿಗೆ ಇಳಿಸಿದ driver, ಎಲ್ಲರೂ ಸುರಕ್ಷಿತ.

ರಾಯಚೂರು: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಸಿರವಾರ ಡಿಪೋಗೆ ಸೇರಿದ ಬಸ್ಸು ರಸ್ತೆ ಬಿಟ್ಟು ಅಪಾಯಕಾರಿಯಾಗಿ ಹೀಗೆ ತಗ್ಗಿಗೆ ಇಳಿದರೂ ಯಾರೂ ಗಾಯಗೊಂಡಿಲ್ಲ ಮತ್ತು ಡ್ರೈವರ್ ಹಾಗೂ…

Bus Free || ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಫ್ರೀ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ…

ತಿಪಟೂರು || Tire explosion : ರಸ್ತೆಯ ಬದಿಯ ಮನೆಗೆ ನುಗ್ಗಿದ KSRTC ಬಸ್, 17 ಮಹಿಳೆಯರು ಸೇರಿ 32 ಮಂದಿಗೆ ಗಾಯ

ತಿಪಟೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್’ಟಿಸಿ ಬಸ್ಸೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದು, ಪರಿಣಾಮ ಘಟನೆಯಲ್ಲಿ 17 ಮಹಿಳೆಯರು ಸೇರಿ 32 ಮಂದಿ ಗಾಯಗೊಂಡಿರುವ…

ಬೆಂಗಳೂರು || ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್‌ – ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ…

ಬೆಂಗಳೂರು || ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ

ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್ಆರ್ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ…

ಮಂಡ್ಯ || ನಿಯಂತ್ರಣ ತಪ್ಪಿ KSRTC ಬಸ್ ಮರಕ್ಕೆ ಡಿಕ್ಕಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ (KSRTC) ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ…

ರಾಯಚೂರು || ಬಸ್ – ಟ್ರ್ಯಾಕ್ಟರ್ ನಡುವೆ ಅಪಘಾತ : ನವವಿವಾಹಿತೆ ಸಾವು

ರಾಯಚೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಕೂಲಿ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು 18 ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರಿನ ಮುದಗಲ್…

ಶಿವಮೊಗ್ಗ || ಕೆಎಸ್‌ಆರ್‌ಟಿಸಿ ದರ ಹೆಚ್ಚಳದ ಹಿನ್ನೆಲೆ || ಖಾಸಗಿ ಬಸ್ ಪ್ರಯಾಣ ದರ ಶೆ. 20 ರಷ್ಟು ಏರಿಕೆಗೆ ಆಗ್ರಹ

ಶಿವಮೊಗ್ಗ: ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆ ಸೇರಿದಂತೆ ಬಹುತೇಕ ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿ ಖಾಸಗಿ ಬಸ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಕೆಎಸ್‌ಆರ್‌ಟಿಸಿ ಟಿಕೆಟ್ ದರವನ್ನು ಶೇ.15ರಷ್ಟು ಟಿಕೆಟ್…