ಚಿಕ್ಕಮಗಳೂರಿನಲ್ಲಿ ಆನೆ ದಾಳಿ: ಇಬ್ಬರ ಸಾ*, ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆರೋಪಿಸಿ ಪ್ರತಿಭಟನೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ…

ದರ್ಶನ್ ಹಾಗೂ ಇತರೆ ಆರೋಪಿಗಳ ಮೇಲೆ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ.

ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ.…

ಶಿವಕುಮಾರ್ ಪ್ರಕರಣದಲ್ಲಿ PSI-PC ಅಮಾನತು, ಗೃಹ ಸಚಿವ ಪರಮೇಶ್ವರ್ ಕಠಿಣ ಕ್ರಮಕ್ಕೆ ಸೂಚನೆ.

ಬೆಂಗಳೂರು: ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂನ ನಿವೃತ್ತ ಸಿಎಫ್‌ಒ ಶಿವಕುಮಾರ್ ಅವರಿಂದ ಲಂಚ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…

ಬೆಂಗಳೂರಿನಲ್ಲಿ ಬೇಜವಾಬ್ದಾರಿ ಬೈಕ್ ಸವಾರ: ಹೆಲ್ಮೆಟ್ ಇಲ್ಲ, ಫೋನ್‌ನಲ್ಲಿ ಮಾತನಾಡಿ ಕಾರಿಗೆ ಡಿ*!

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್​​ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್​​ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್​​ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್​ ಚಲಿಸಿದ್ದಾನೆ. ಬೈಕ್​​ನಲ್ಲಿ ಮಿರರ್​​​​​ ಇಲ್ಲ, ಬೈಕ್​​ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್​​​ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್​​ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್​ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್​​ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್​ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್​ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…

NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ…

ತುಳಸಿ ಹಬ್ಬ 2025: ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಮಹತ್ವ ಏನು ಗೊತ್ತಾ..?

ತುಳಸಿ ಹಬ್ಬವು ಕಾರ್ತಿಕ ಮಾಸದಲ್ಲಿ ದೀಪಾವಳಿಯ ನಂತರ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಲಕ್ಷ್ಮಿ ಸ್ವರೂಪಿಯಾದ ತುಳಸಿಯನ್ನು ವಿಷ್ಣು ಸ್ವರೂಪಿಯಾದ ಶಾಲಿಗ್ರಾಮದೊಂದಿಗೆ ಪೂಜಿಸಲಾಗುತ್ತದೆ. ಈ ಲೇಖನದಲ್ಲಿ ಹಬ್ಬದ…

 “ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ” ಎಂದ ತಂದೆ ವಿಜುಗೌಡ!

ವಿಜಯಪುರ: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.…

ಸರ್ದಾರ್ ಪಟೇಲ್ ಜಯಂತಿ ಸಂಭ್ರಮ — ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಅದ್ಧೂರಿ ಪರೇಡ್.

ಅಹಮದಾಬಾದ್: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ. ಹತ್ತು…

ತರಕಾರಿ ಬೆಲೆ ಗಗನಕ್ಕೇರಿದ ಬೆಲೆ, ಗ್ರಾಹಕರಿಗೆ ಸಿಕ್ಕಾಪಟ್ಟೆ ಹೊರೆ!

ಬೆಂಗಳೂರು: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ ಕೇಳಿದ ಗ್ರಾಹಕರು…