ಆನೇಕಲ್ ಬಳಿ ಲಾರಿ ಕೆರೆಗೆ ಉರುಳಿ ಚಾಲಕ ಸಾ*ವು.

ಆನೇಕಲ್​​ : ರಸ್ತೆ ಗುಂಡಿ ತಪ್ಪಿಸಲು ಹೋದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಕೆರೆಗೆ ಬಿದ್ಧ ಘಟನೆ ಆನೇಕಲ್​​ನ ಅತ್ತಿಬೆಲೆ-ಸರ್ಜಾಪುರ ಮುಖ್ಯರಸ್ತೆಯ ಬಿದರಗುಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಕಲಬುರಗಿ…

ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ಹೈವೇ ಬ್ರಿಡ್ಜ್ ನಿಂದ ಕಾರುಕೆಳಗುರುಳಿದೆ.

ಕೋಲಾರ: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.…

ತಮಿಳುನಾಡಿನಲ್ಲಿ 2 ಬಸ್ಸುಗಳ ಮುಖಾಮುಖಿ ಡಿಕ್ಕಿ.

ಚೆನ್ನೈ: ತಮಿಳುನಾಡಿನ ತೇಂಕಾಸಿ ಜಿಲ್ಲೆಯಲ್ಲಿಎರಡು ಖಾಸಗಿ ಬಸ್ಸುಗಳು ಮುಖಾಮುಖಿಯಾಗಿ ಢಿಕ್ಕಿಯಾಗಿ ಭಾರೀ ಸಾವು ನೋವು ಸಂಭವಿಸಿದೆ. ಈ ಭೀಕರ ಅಪಘಾತ ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, 28 ಮಂದಿಗೆ…

 “BMTCಯ ಬಸ್ ಡಿಕ್ಕಿ: ಮಡಿವಾಳದಲ್ಲಿ 65 ವರ್ಷದ ವೃದ್ಧ ಮೃತ, ಚಾಲಕನ ನಿರ್ಲಕ್ಷ್ಯಕ್ಕೆ ತನಿಖೆ”.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​​ಗಳ ಅಪಘಾತ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಚಾಲಕರ ಅಜಾಗರೂಕತೆಗೆ ಅಮಾಯರು ಬಲಿಯಾಗುತ್ತಿದ್ದಾರೆ. ಈ ನಡುವೆ ಇಂತಹುದ್ದೇ ಮತ್ತೊಂದು ಘಟನೆ ಮಡಿವಾಳದ ಬಸ್​…

 “ಲಕ್ನೋದಲ್ಲಿ ನಗ್ನ ಮಹಿಳೆಯ ಅಪಾಯಕಾರಿ ಸಾಹಸ – ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲೇ ವೈರಲ್ ಸ್ಟಂಟ್!”

ಲಕ್ನೋ: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯೊಬ್ಬರು ಅಪಾಯಕಾರಿ ಸಾಹಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಕ್ನೋದ ಶಹೀದ್ ಪಾತ್​ನಲ್ಲಿ ಘಟನೆ ವರದಿಯಾಗಿದೆ.  ವೈರಲ್…

ಇಂದೋರ್‌ನಲ್ಲಿ ಬಸ್ ಕಂದಕಕ್ಕೆ ಉರುಳಿದ ದುರಂತ – ಮೂವರು ಸಾ*, 30ಕ್ಕೂ ಹೆಚ್ಚು ಜನರಿಗೆ ಗಾಯ.

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 38 ಜನರು ಗಾಯಗೊಂಡಿದ್ದಾರೆ. ಇಂದೋರ್ ಮತ್ತು ಮ್ಹೋವ್ ನಡುವಿನ…

ತೆಲಂಗಾಣ ಬಸ್ ದುರಂತ: ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ತಂದೆ.

ಹೈದರಾಬಾದ್: ತೆಲಂಗಾಣ ಬಸ್ ಅಪಘಾತದಲ್ಲಿ ಮೂವರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ತಲೆಯ ಮೇಲೆ ಬಿದ್ದಂತಾಗಿದೆ. ಮೂವರು ಹೆಣ್ಣುಮಕ್ಕಳು ಮಸಣ ಸೇರಿದ್ದಾರೆ. ಪೋಷಕರ ಆಕ್ರಂದ ಮುಗಿಲುಮುಟ್ಟಿದೆ. ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಅದರಲ್ಲಿ ಯಲ್ಲಯ್ಯ ಗೌಡ ಎಂಬುವವರ ಮೂವರು ಹೆಣ್ಣುಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ತನುಷಾ, ಸಾಯಿ ಪ್ರಿಯಾ ಮತ್ತು ನಂದಿನಿ ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ಇತ್ತೀಚೆಗೆ ಕುಟುಂಬವು ತಮ್ಮ ಹಿರಿಯ ಮಗಳು…

ಚಾಮರಾಜನಗರ ದಿಂಬಂ ಘಾಟ್ನಲ್ಲಿ ಕಾಡಾನೆ ಉಪಟಳ: ಲಾರಿ, ವಾಣಿಜ್ಯ ವಾಹನಗಳಿಗೆ ತಡೆ.

ಚಾಮರಾಜನಗರ: ತಮಿಳುನಾಡಿನ ದಿಂಬಂ ಘಾಟ್​​ನಲ್ಲಿ ಕಾಡಾನೆ ಉಪಟಳ ಮತ್ತೆ ಮುಂದುವರೆದಿದೆ. ಕಬ್ಬು ಹಾಗೂ ಬಾಳೆಗಾಗಿ ಗಜಪಡೆ ಕಾಡಿನಿಂದ ನಾಡಿಗೆ ಮತ್ತೆ ಎಂಟ್ರಿಕೊಟ್ಟಿದೆ. ನಸುಕಿನಲ್ಲಿ ಮತ್ತೆ ಕಾಡಿನಿಂದ ನಾಡಿಗೆ ಬಂದ…

ಬಂಟ್ವಾಳದಲ್ಲಿ ಆಂಬುಲೆನ್ಸ್ ತಡೆದ ಬೈಕ್ ಸವಾರನಿಗೆ 14 ದಿನ ನ್ಯಾಯಾಂಗ ಬಂಧನ.

ಬಂಟ್ವಾಳ : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ…

ಬೆಂಗಳೂರಿನಲ್ಲಿ ಬೇಜವಾಬ್ದಾರಿ ಬೈಕ್ ಸವಾರ: ಹೆಲ್ಮೆಟ್ ಇಲ್ಲ, ಫೋನ್‌ನಲ್ಲಿ ಮಾತನಾಡಿ ಕಾರಿಗೆ ಡಿ*!

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಸುರಕ್ಷತೆ ಎಷ್ಟಿದೆ? ಎಂಬ ಪ್ರಶ್ನೆಗಳು ಮೂಡಿದೆ. ದಿನಕ್ಕೊಂದು ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿರುವ ಅನೇಕ ವಿಡಿಯೋಗಳು ಸಾಕ್ಷಿಯಾಗಿದೆ. ಈ ರೀತಿಯ ಬೇಜವ್ದಾರಿತನದ ರಸ್ತೆ ಸಂಚಾರವೇ ಕಾರಣ, ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಿಂದಲ್ಲೇ ಬೆಂಗಳೂರಿನಲ್ಲಿ ಸುರಕ್ಷತೆ ಎಷ್ಟಿದೆ ಎಂಬುದು ತಿಳಿಯುತ್ತದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ದಿನಕ್ಕೊಂದು ಅಪಘಾತಗಳು ನಡೆಯುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇಂತಹ ಅಜಾಗರೂಕ ಚಾಲನೆಗಳು ಜನರಲ್ಲಿ ಕಳವಳ ಮೂಡಿಸಿದೆ. ಯೂಟ್ಯೂಬರ್ ಒಬ್ಬರು ತಮ್ಮ ಕಣ್ಮುಂದೆಯೇ ನಡೆದ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೈಕ್ ಸವಾರನೊಬ್ಬ ಫೋನ್‌ನಲ್ಲಿ ಮಾತನಾಡುತ್ತಾ ರಸ್ತೆ ಕ್ರಾಸ್​​ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಡ್ಯಾಶ್‌ಕ್ಯಾಮ್ ಕ್ಯಾಮರ್​​ದಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ವಿಡಿಯೋದಲ್ಲಿ ಬೈಕ್​​ ಸವಾರ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸದೆ ಬೈಕ್​ ಚಲಿಸಿದ್ದಾನೆ. ಬೈಕ್​​ನಲ್ಲಿ ಮಿರರ್​​​​​ ಇಲ್ಲ, ಬೈಕ್​​ ಹಿಂದೆ ಕುತಿರುವ ವ್ಯಕ್ತಿ ಹಾಗೂ ಸವಾರ, ಇಬ್ಬರು ಹೆಲ್ಮೆಟ್​​​ ಕೂಡ ಧರಿಸಿಲ್ಲ. ಇನ್ನೊಂದು ಕಡೆ ವಿರುದ್ಧ ದಿಕ್ಕಿನಿಂದ ಕಾರನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಿಂದ ಯಾವುದೇ ತೊಂದರೆಗಳು ಆಗಿಲ್ಲ. ಆದರೆ ಇದು ಸಂಚಾರಿ ನಿಯಮಗಳಿಗೆ ವಿರುದ್ಧವಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ಬೈಕ್ ಸವಾರನ ನಿರ್ಲಕ್ಷ್ಯ ವರ್ತನೆ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಇನ್ನು ವಿಡಿಯೋವನ್ನು ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಬೈಕ್​​ ಸವಾರ ಫೋನ್‌ನಲ್ಲಿ ಮಾತನಾಡುತ್ತಿರುವ ಮತ್ತು ಹೆಲ್ಮೇಟ್​ ಧರಿಸದೇ ಇರುವುದು ಎಷ್ಟು ಸರಿ? ಇದಕ್ಕೆ ಏನ್​​ ಹೇಳುತ್ತಿರಾ? ಎಂದು ವಿಡಿಯೋ ಪೋಸ್ಟ್​ಗೆ ಶೀರ್ಷಿಕೆ ನೀಡಿದ್ದಾರೆ. ಅನೇಕ ಬಳಕೆದಾರರು ಬೈಕ್ ಸವಾರನ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದ್ದು, ಕಾರು ಚಾಲಕನ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಬೈಕ್​ ಸವಾರನ್ನು ಮಾಹಿತಿಯನ್ನು ಪಡೆದು, ಆತ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. For…