ನವದೆಹಲಿ: ತಮಿಳುನಾಡಿನ ಅವಿನಾಶಿಯಲ್ಲಿ ನಡೆದ ಟಾಟಾ ಹ್ಯಾರಿಯರ್ ಇವಿ ಕಾರು ಅಪಘಾತ ಆತಂಕ ಮೂಡಿಸಿದೆ. ಎಸ್ಯುವಿಯನ್ನು ಇಳಿಜಾರಿನಲ್ಲಿ ನಿಲ್ಲಿಸಿದ್ದಾಗ ಇದ್ದಕ್ಕಿದ್ದಂತೆ ಹಿಂದಕ್ಕೆ ಚಲಿಸಲಾರಂಭಿಸಿದೆ.
ಆಗ ವ್ಯಕ್ತಿಯೊಬ್ಬರು ಕಾರಿನ ಬಾಗಿಲನ್ನು ತೆರೆದು ಬ್ರೇಕ್ ಹಾಕಲು ಪ್ರಯತ್ನಿಸಿದ್ದಾರೆ. ಆಗ ಅವರ ಮೇಲೆ ಕಾರು ಹರಿದಿದೆ. ಈ ವೇಳೆ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಬ್ರೈನ್ ಡೆಡ್ ಆಗಿದೆ. ನಂತರ ಆ ಕಾರು ಹಿಂದಿದ್ದ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಟಾಟಾ ಮೋಟಾರ್ಸ್ ಸಂತಾಪ ವ್ಯಕ್ತಪಡಿಸಿದೆ. ಮೃತರ ಕುಟುಂಬಕ್ಕೆ ನಮ್ಮ ಸಂತಾಪಗಳು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು, ಅದಕ್ಕೆ ಕಾರಣವನ್ನು ಸಂಗ್ರಹಿಸುತ್ತಿದ್ದೇವೆ ಎಂದು ಟಾಟಾ ಗ್ರೂಪ್ ತಿಳಿಸಿದೆ.
For More Updates Join our WhatsApp Group :