ದಸರಾ ಮಹೋತ್ಸವಕ್ಕೆ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ದಸರಾ ಮಹೋತ್ಸವಕ್ಕೆ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ಅಕ್ಟೋಬರ್ 12ರವರೆಗೆ ನಡೆಯುವ ಮೈಸೂರು ದಸರಾ ಮಹೋತ್ಸವಕ್ಕೆ ಅಂತರ್ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಕೃಷ್ಣರಾಜಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೊಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *