ಹೌದು, ಕೌಟುಂಬಿಕ ಕಲಹ ಹಿನ್ನೆಲೆ ಖಾಸಗಿ ಶಾಲೆಯ ಶಿಕ್ಷಕಿ ಒಬ್ಬರು ಡೆತ್ ನೋಟ್ ಬರೆದಿಟ್ಟು ಶಾಲೆಯಲ್ಲಿ ವಿಷ ಕುಡಿದಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. ಬಸಮ್ಮ ಅಲಿಯಾಸ್ ರೂಪ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.
![](http://pragatitv.in/wp-content/uploads/2022/09/JEENI_ADD_WEB-1024x576.jpg)
ವರದಕ್ಷಿಣೆ ಕಿರುಕುಳ ಆಕೆಯ ಸಾವಿಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ವಿಚಾರವಾಗಿ ಗಂಡ ಅರ್ಜುನ್, ಅತ್ತೆ ಅಂಬಿಕಾ, ನಾದಿನಿ ಸಂಗೀತ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ನ್ಯಾಷನಲ್ ಶಾಲೆ ಅರ್ಜುನ್ ಕುಟುಂಬದ ಒಡೆತನಕ್ಕೆ ಸೇರಿದ ಶಾಲೆ. ನಿನ್ನೆ ರವಿವಾರ ಪರೀಕ್ಷೆ ಕೆಲಸದ ನೆಪದಲ್ಲಿ ಶಾಲೆಗೆ ಬಂದು ಬಸ್ಸಮ್ಮ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸ್ಸಮ್ಮ ಆತ್ಮಹತ್ಯೆಗೂ ಮುನ್ನ ಸುಸೈಡ್ ಲೆಟರ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
ಹತ್ತು ವರ್ಷಗಳ ಹಿಂದೆ ಅರ್ಜುನ್ ಮತ್ತು ಬಸ್ಸಮ್ಮ ಪ್ರೀತಿಸಿ ಮದುವೆಯಾಗಿದ್ದರು. ಆದರೀಗ ಬಸ್ಸಮ್ಮ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಸಾವನ್ನಪ್ಪಿದ್ದಾರೆ. ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Pragati TV Social Connect for more latest u