ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ವೀಗದ ಶಂಕೆ: ಶೌಚಾಲಯದಲ್ಲಿ ಸಿರಿಂಜ್ ಪತ್ತೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ವೀಗದ ಶಂಕೆ: ಶೌಚಾಲಯದಲ್ಲಿ ಸಿರಿಂಜ್ ಪತ್ತೆ.

ತುಮಕೂರು – ಕ್ರೀಡಾಕೂಟ ಆರಂಭದಲ್ಲೇ ವಿವಾದ.

ತುಮಕೂರು : ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕಲ್ಪತರು ನಾಡು ತುಮಕೂರು  ಸಾಕ್ಷಿಯಾಗಿದೆ. 20 ವರ್ಷದೊಳಗಿನವರ (U-20) 24ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಯುವ ಪ್ರತಿಭೆಗಳು ತಮ್ಮ ಸಾಧನೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ಆರಂಭದ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆಯಾಗಿದ್ದು, ಗೊಂದಲ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಕ್ರೀಡಾಕೂಟದ ಪಾರದರ್ಶಕತೆಯ ಬಗ್ಗೆ ಅನುಮಾನಗಳು ಮೂಡಿವೆ.

ದೇಶದ 28 ರಾಜ್ಯಗಳಿಂದ ಸುಮಾರು 1,500ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗಿಯಾಗಲಿದ್ದು, ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದೆ. ಇನ್ನು 40 ವಿವಿಧ ಕ್ರೀಡಾ ಚಟುವಟಿಕೆ ನಡೆಯಲಿದ್ದು, ಬಿಸಿಲಿನ ತಾಪಮಾನಕ್ಕೆ ಅನುಗುಣವಾಗಿ ಕ್ರೀಡಾಚಟುವಟಿಕೆಗಳು ಬೆಳಿಗ್ಗೆ ಹಾಗೂ ಸಂಜೆ ನಂತರ ಫೆಡ್ ಲೈಟ್​ನಲ್ಲಿ ನಡೆಯಲಿವೆ. ಈ ಕ್ರೀಡಾಕೂಟದಲ್ಲಿ ವಿಜೇತರು ಆಗಸ್ಟ್ ತಿಂಗಳಲ್ಲಿ ಅಮೆರಿಕಾದ ಓರೆಗಾನ್​​ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾರತ ಪ್ರತಿನಿಧಿಸಲು ಆಯ್ಕೆ‌ ಆಗಲಿದ್ದಾರೆ.

ಶೌಚಾಲಯದಲ್ಲಿ ಸಿರಿಂಜ್​​ಗಳು ಪತ್ತೆ

ಇನ್ನು ಇಂದು ಬೆಳಿಗ್ಗೆ ಮಹಾತ್ಮಗಾಂಧಿ ಕ್ರೀಡಾಂಗಣದ ಬಳಿಯ ಜಿ. ಪರಮೇಶ್ವರ್ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದ ಮುಖಾಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಆದರೆ ಚಾಲನೆ ಸಿಕ್ಕ ಮೊದಲ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್​​ಗಳು ಪತ್ತೆಯಾಗಿದ್ದು, ಉದ್ದೀಪನ ಮದ್ದು ಬಳಕೆಯ ಅನುಮಾನ ಮೂಡಿದೆ.

ದೇಶದ ವಿವಿಧ ರಾಜ್ಯಗಳಿಂದ ಸಣ್ಣಪುಟ್ಟ ಹಳ್ಳಿಗಳಿಂದ ತಮ್ಮದೇ ಕನಸು ಹೊತ್ತು ಬಂದ 20 ವರ್ಷದೊಳಗಿನ ಪ್ರತಿಭೆಗಳ ಭವಿಷ್ಯ ರೂಪಿಸುವ ಕ್ರೀಡ್ರಾಕೂಟದ ನಡುವೆ ಶೌಚಾಲಯದಲ್ಲಿ ಕಂಡ ಸಿರಿಂಜ್​​ಗಳು, ಉದ್ದೀಪನ ಅನುಮಾನ ಮೂಡಿಸಿದ್ದು, ಕೆಲ ಸ್ಪರ್ಧಿಗಳು ಕಳ್ಳಾಟ ನಡೆಸಿರುವ ಶಂಕೆ ಮೂಡಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *