ತಲೈವಾ ತಮ್ಮ ಅಭಿಮಾನಿಗಳಿಗೆ ಮತ್ತು ಆತ್ಮೀಯರಿಗೆ ಕೃತಜ್ಞತೆ ತಿಳಿಸಿದ್ದಾರೆ.

ತಲೈವಾ ತಮ್ಮ ಅಭಿಮಾನಿಗಳಿಗೆ ಮತ್ತು ಆತ್ಮೀಯರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಸುಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಕಾರಣವೇನಪ್ಪ ಅಂದ್ರೆ, ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿ ಎಂದು ಅಭಿಮಾನಿಗಳು ಮತ್ತು ಆತ್ಮೀಯರು ಪ್ರಾರ್ಥಿಸಿದ್ದರು.

ಅನಾರೋಗ್ಯದ ಕಾರಣ ರಜನಿಕಾಂತ್ ಅವರನ್ನು ಸೆ.30 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

”ನಾನು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ನನ್ನ ಎಲ್ಲಾ ರಾಜಕೀಯ ಮಿತ್ರರಿಗೆ, ನನ್ನ ಎಲ್ಲಾ ಚಿತ್ರರಂಗದ ಗೆಳೆಯರಿಗೆ, ನನ್ನ ಎಲ್ಲಾ ಹಿತೈಷಿಗಳಿಗೆ, ಪತ್ರಿಕಾ ಮತ್ತು ಮಾಧ್ಯಮದವರಿಗೆ, ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನನ್ನು ಪ್ರೀತಿಸುವ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆ” ಎಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ ನಟ ರಜನಿಕಾಂತ್

ಜೊತೆಗೆ “ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ, ಪ್ರೀತಿಯ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಹೃತ್ಪೂರ್ವಕ ಧನ್ಯವಾದಗಳು. ಅಮಿತಾಬ್ ಬಚ್ಚನ್ ಅವರ ಪ್ರೀತಿ, ಕಾಳಜಿಗೆ ನನ್ನ ಹೃದಯ ಸ್ಪರ್ಶಿಸಿದೆ” ಎಂದು ಪ್ರಧಾನ ಮಂತ್ರಿ ಮಾತ್ತು ಅಮಿತಾಬ್ ಬಚ್ಚನ್ ಅವರಿಗು ಕೃತಜ್ಞತೆ ತಿಳಿಸಿದ್ದಾರೆ.

ಇನ್ನು ಇವರ ಮುಂದಿನ ಬಹುನಿರೀಕ್ಷಿತ ಚಿತ್ರ “ಕೂಲಿ”. ಇತ್ತೀಚೆಗೆ ಬಿಡುಗಡೆಯಾದ ಟೀಸರ್ ವೈರಲ್ ಆಗಿದ್ದು, ಆಕ್ಷನ್ ಆಧಾರಿತ ಪಾತ್ರದಲ್ಲಿ ತಲೈವಾ ಕಾಣಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *