ಬೈಕ್ ಟ್ಯಾಕ್ಸಿ ವಿಚಾರ ಮತ್ತೆ ಕಾನೂನು ತಿರುವು.

ಬೈಕ್ ಟ್ಯಾಕ್ಸಿ ವಿಚಾರ ಮತ್ತೆ ಕಾನೂನು ತಿರುವು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ SLP?

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಹಿನ್ನೆಲೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್​​ಗೆ SLP ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಮನವಿ ಮಾಡಿದೆ. ಈ ಕುರಿತು ಮಾತನಾಡಿರುವ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಅಧ್ಯಕ್ಷ ನಟರಾಜ ಶರ್ಮಾ, ಬೈಕ್ ಟ್ಯಾಕ್ಸಿಯವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ರಾಹುಲ್ ಪತ್ರ ಬರೆದು, ಬೈಕ್ ಟ್ಯಾಕ್ಸಿಯವರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದ್ದಾರೆ. ಹೀಗಾಗಿ ನಮಗೆ ಭಯ ಆಗುತ್ತಿದ್ದು, ಹೋರಾಟಕ್ಕೂ ಹಿನ್ನೆಡೆ ಆಗಬಹುದು. ನಮ್ಮ ಮನವಿ ಸ್ವೀಕರಿಸಿ SLP ಸಲ್ಲಿಸಲು ಸಿಎಂ ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಬೈಕ್ ಟ್ಯಾಕ್ಸಿ ಸುರಕ್ಷತೆಯ ಬಗ್ಗೆ ನಿಮ್ಹಾನ್ಸ್ ವೈದ್ಯರು ಹಾಗೂ ಪೊಲೀಸ್ ಇಲಾಖೆ ಕೂಡ ಆತಂಕ ವ್ಯಕ್ತಪಡಿಸಿದೆ ಎನ್ನಲಾಗಿದ್ದು, ಬೈಕ್​​ ಟ್ಯಾಕ್ಸಿಗಳ ಕಾರ್ಯಾಚರಣೆಯಿಂದ ಸಾರ್ವಜನಿಕ ಸುರಕ್ಷಿತಗೆ ಅಪಾಯ ಆಗಬಹುದು. ಅಪಘಾತ ಪ್ರಮಾಣ ಹೆಚ್ಚಳದ ಸಾಧ್ಯತೆಯ ಜೊತೆಗೆ ಪ್ರಯಾಣಿಕರಿಗೆ ಜೀವ ಭದ್ರತೆ ಇರಲ್ಲ. ಇನ್ನು ಆಟೋ, ಟ್ಯಾಕ್ಸಿ ಮತ್ತು ಬಸ್​​ಗಳಿಗೂ ಇವು ಹೊಡೆತ ನೀಡಲಿವೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಅಲ್ಲದೆ 2022ರಲ್ಲಿ ICRA ಅಂಕಿ ಅಂಶಗಳ ಪ್ರಕಾರವೂ ಬೈಕ್​​ ಅಪಘಾತಗಳೇ ಹೆಚ್ಚು ನಡೆದಿರೋದು ಸಾಭೀತಾಗಿದೆ.

ಅಪಘಾತಗಳ ಅಂಕಿಅಂಶ
ಬೈಕ್​​ಶೇ.40
ಕಾರು, ಟ್ಯಾಕ್ಸಿ, ವ್ಯಾನ್ಶೇ.17
ಪಾದಚಾರಿಗಳಿಂದಶೇ.17
ಆಟೋ ರಿಕ್ಷಾಶೇ.4
ಟ್ರಕ್, ಲಾರಿಶೇ.9
ಬಸ್ಶೇ.3
ಸೈಕಲ್ಶೇ.2
ಇತರೆಶೇ.7

ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿತ್ತು.ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ಬಗ್ಗೆ ಆದೇಶಿಸಿದ್ದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ , ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *