ಧಾರವಾಡದಲ್ಲಿ ಮನೆ ಕೊಡಲು ಮರೆಯಿತು ಸರ್ಕಾರ!

ಧಾರವಾಡದಲ್ಲಿ ಮನೆ ಕೊಡಲು ಮರೆಯಿತು ಸರ್ಕಾರ!

ಬಡವರಿಗೆ ಮನೆ ಸಿಕ್ಕರೂ ಮೂಲ ಸೌಲಭ್ಯಗಳ ಕೊರತೆ ಸಮಸ್ಯೆ

ಧಾರವಾಡ : ಸಿಎಂ ನೆತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ರಾಜ್ಯದ 42 ಸಾವಿರ ಬಡ ಜನರಿಗೆ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಹೊಸ ಚರ್ಚೆ ಶುರುವಾಗಿದ್ದು, ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಿಕೊಡಲಾಗಿರುವ ಜಿ ಪ್ಲಸ್​​ ಮಾದರಿಯ ಸುಮಾರು 1,179 ಮನೆಗಳಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸಿ ಕೊಡೋದು ಯಾವಾಗ ಎಂಬ ಪ್ರಶ್ನೆ ಎದ್ದಿದೆ.

ಅರವಿಂದ ಬೆಲ್ಲದ್ ಕ್ಷೇತ್ರದಲ್ಲಿ ಸ್ಲಮ್ ಬೋರ್ಡ್‌ನಿಂದ ಮನೆಗಳು ನಿರ್ಮಾಣಗೊಂಡಿದ್ದರೂ ಬಡಾವಣೆಗೆ ಈ ವರೆಗೂ ಅಗತ್ಯ ಸೌಲಭ್ಯಗಳು ಸಿಕ್ಕಿಲ್ಲ. ಚರಂಡಿ ನಿರ್ಮಿಸದೇ ಹಕ್ಕುಪತ್ರ ವಿತರಣೆ ಮಾಡಲಾಗಿದ್ದು, ಕುಡಿಯೋ ನೀರಿನ ಸಮಸ್ಯೆಯೂ ಇದೆ. ಹೀಗಾಗಿ ಈ ಮನೆಗಳಿಗೆ ಬಂದು ನೆಲೆಸಲು ಫಲಾನುಭವಿಗಳು ಹಿಂದೇಟು ಹಾಕುತ್ತಿದ್ದು, ಬಹುಥೇಕ ಮನೆಗಳು ಖಾಲಿ ಬಿದ್ದಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *