ರ್ನಾಟಕ ವಿಧಾನ ಮಂಡಲ ಮುಂಗಾರು ಅಧಿವೇಶನಆರಂಭವಾಗಿದ್ದು, ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನ ಕೂಡ ಸದನ ವಾಲ್ಮೀಕಿ ಹಗರಣ ರ್ಚೆಯಲ್ಲೇ ಕಳೆದು ಹೋಯ್ತು. ಶುಕ್ರವಾರಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು. ಸದನ ಗದ್ದಲದಿಂದ ಕೂಡಿತು. ಗದ್ದಲದ ನಡುವೆಯೇ ಸದನದಲ್ಲಿ ರ್ಕಾರ ಮೂರು ವಿಧೇಯಕಗಳನ್ನು ಮಂಡನೆ ಮಾಡಿತು.
2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2024ನೇ ಸಾಲಿನ ವಿಧಾನಮಂಡಲ (ಅರ್ಹತಾ ನಿವಾರಣಾ) ವಿಧೇಯಕ, ರ್ನಾಟಕ ಸಿನಿ&ಸಾಂಸ್ಕೃತಿಕ ಕರ್ಯರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ ಮಂಡಿಸಲಾಯಿತು.
ವಿಧೇಯಕ ಮಂಡನೆ ವೇಳೆ ವಿಪಕ್ಷಗಳು ರ್ಕಾರದ ವಿರುದ್ಧ ದಿಕ್ಕಾರ ಕೂಗಿದವು. ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಣ ನುಗ್ಗಿದ ರ್ಕಾರದ ವಿರುದ್ಧ ದಿಕ್ಕಾರ ಅಂತ ವಿಪಕ್ಷಗಳು ಕೂಗಿದವು. ಜೊತೆಗೆ ಏನಿಲ್ಲ ಏನಿಲ್ಲ ರ್ಕಾರದ ಬಳಿ ಹಣವಿಲ್ಲ, ಶಾಸಕರಿಗೆ ಅನುದಾನ ನೀಡಲು ರ್ಕಾರದ ಬಳಿ ಹಣವಿಲ್ಲ ಎಂದು ಹಾಡು ಹಾಡಿದರು.