‘ಹಂದಿ’ ಪದ ಬಳಕೆ ವಿಚಾರ : ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು..?

ವಿಜಯೇಂದ್ರ ಕೇಳಿದ ಕೂಡಲೇ ನಾನು ರಾಜೀನಾಮೆ ಕೊಡಬೇಕಾ?: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

ಮೈಸೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಎಡಿಜಿಪಿ ‘ಹಂದಿ’ ಎಂದು ಬರೆದಿದ್ದಾರಾ?. ಅವರು ಎಡಿಜಿಪಿ ಇಂಗ್ಲಿಷ್​ನ ಬರ್ನಾರ್ಡ್ ಷಾ ಅವರ ವಾಕ್ಯವನ್ನು ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಇದಕ್ಕೆ ನಾನು ಕಾಮೆಂಟ್​ ಮಾಡುವುದಿಲ್ಲ. ಕುಮಾರಸ್ವಾಮಿ ಅವರು ಎಡಿಜಿಪಿ ಅವರ ಮೇಲೆ ಆರೋಪ ಮಾಡಿದ್ದರು. ಅದಕ್ಕೆ ಎಡಿಜಿಪಿ ಉತ್ತರಿಸಿದ್ದಾರೆ” ಎಂದರು.

ಹಂದಿ ಎಂಬ ಪದ ಬಳಕೆ ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗೆ, “ಈ ಕುರಿತಾಗಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಸುದೀರ್ಘ ವಿವರಣೆಯನ್ನೂ ನೀಡುವುದಿಲ್ಲ. ಅದರಲ್ಲೂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡಲಾರೆ ಎಂದು ನಿನ್ನೆಯೇ ಹೇಳಿದ್ದೇನೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *