ದೆಹಲಿ ರಕ್ಷಣೆಗೆ ‘ಸುದರ್ಶನ ಚಕ್ರ’ರಾಜಧಾನಿ ರಕ್ಷಣಾ ಶಕ್ತಿ.

ದೆಹಲಿ ರಕ್ಷಣೆಗೆ ‘ಸುದರ್ಶನ ಚಕ್ರ’ರಾಜಧಾನಿ ರಕ್ಷಣಾ ಶಕ್ತಿ.

ದೆಹಲಿಗೆ ‘ಸುದರ್ಶನ ಚಕ್ರ’ ಅಳವಡಿಕೆಗೆ ಕೇಂದ್ರ ಒಪ್ಪಿಗೆ.

ನವದೆಹಲಿ: ಮಿಲಿಟರಿ ನೆಲೆಗಳು, ಸಂಸತ್ ಭವನ, ರಾಷ್ಟ್ರಪತಿ ಭವನ ಇತ್ಯಾದಿ ಬಹಳ ಸೂಕ್ಷ್ಮವೆಂದು ಪರಿಗಣಿಸಲಾದ ಹಾಗೂ ಮೇಲ್ಭಾಗದಲ್ಲಿ ಹಾರಾಟ ನಿಷೇಧ ಮಾಡದ ಸ್ಥಳಗಳ ರಕ್ಷಣೆಗಾಗಿ ಭಾರತ ಸರ್ಕಾರ ‘ಸುದರ್ಶನ ಚಕ್ರ’ವನ್ನು ಅಳವಡಿಸುತ್ತಿದೆ. ಡಿಆರ್​ಡಿಒ ಅಭಿವೃದ್ಧಿಪಡಿಸಿರುವ ಏಕೀಕೃತ ವಾಯು ರಕ್ಷಣಾ ಶಸ್ತ್ರ ವ್ಯವಸ್ಥೆಯನ್ನು (ಐಎಡಿಡಬ್ಲ್ಯುಎಸ್) 5,181 ಕೋಟಿ ರೂ ಖರೀದಿಸಲು ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಈ ಮಲ್ಟಿ ಲೇಯರ್ ವೆಪನ್ ಸಿಸ್ಟಂ ಅನ್ನು ದೆಹಲಿ ಎನ್​ಸಿಆರ್ ಪ್ರದೇಶದಲ್ಲಿರುವ ವಿಐಪಿ-89 ವಲಯದ ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಏಕೀಕೃತ ವಾಯು ರಕ್ಷಣಾ ಶಸ್ತ್ರ ವ್ಯವಸ್ಥೆಯನ್ನು ಡಿಆರ್​ಡಿಒ ಅಭಿವೃದ್ಧಿಪಡಿಸಿದೆ. ಏರ್ ಫೋರ್ಸ್ ಕೇಂದ್ರಿತ ಸಿಸ್ಟಂ ಇದಾಗಿದ್ದು, ಒಂದು ಸ್ಥಳಕ್ಕೆ ಬಹು ಎಳೆಗಳಲ್ಲಿ ರಕ್ಷಣೆ ಕೊಡಬಲ್ಲುದು. ದೆಹಲಿಯ ವಿಐಪಿ-89 ಝೋನ್ ರಕ್ಷಣೆಗೆಂದು ಸದ್ಯ ಒಂದು ಸಿಸ್​ಟಂ ಅನ್ನು ತರಿಸಲಾಗುತ್ತಿದೆ. ಇದು ದೆಹಲಿಯ ಸುತ್ತಮುತ್ತಲ 30 ಕಿಮೀ ಶ್ರೇಣಿವರೆಗಿನ ಪ್ರದೇಶಕ್ಕೆ ರಕ್ಷಣೆ ಕೊಡುತ್ತದೆ. ಆಕಾಶದಿಂದ ಡ್ರೋನ್ ಆಗಲೀ, ಮಿಸೈಲ್ ಆಗಲಿ ಯಾವುದೇ ದಾಳಿಯಾದರೂ ಇದು ತಡೆಯಬಲ್ಲುದು. ಒಂದು ರೀತಿಯಲ್ಲಿ ಸುದರ್ಶನ ಚಕ್ರದ ರೀತಿಯಲ್ಲಿ ರಕ್ಷಣೆ ಕೊಡುತ್ತದೆ.

ಈ ವರ್ಷದ ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ (2025ರ ಆಗಸ್ಟ್ 15) ಪ್ರಧಾನಿ ನರೇಂದ್ರ ಮೋದಿ ಅವರು ಮಿಷನ್ ಸುದರ್ಶನ ಚಕ್ರ ಘೋಷಿಸಿದ್ದರು. 2035ರ ವೇಳೆಗೆ ದೇಶದ ಪ್ರಮುಖ ಸ್ಥಳಗಳು ಮತ್ತು ನಗರಗಳಿಗೆ ಸಮಗ್ರ ಭದ್ರತಾ ವ್ಯವಸ್ಥೆ ನಿರ್ಮಿಸುವುದು ಈ ಮಿಷನ್​ನ ಗುರಿ. ಇದರ ಭಾಗವಾಗಿ ಈಗ ಒಂದು ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಅನ್ನು ಖರೀದಿಸಿ ದೆಹಲಿಯ ರಕ್ಷಣೆಗೆ ನಿಯೋಜಿಸಲಾಗುತ್ತಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *