ಸಭಾಪತಿ ಹೊರಟ್ಟಿ–ನಾಗರಾಜ್ ಯಾದವ್ ನಡುವೆ ಕಿಡಿ.

ಸಭಾಪತಿ ಹೊರಟ್ಟಿ–ನಾಗರಾಜ್ ಯಾದವ್ ನಡುವೆ ಕಿಡಿ.

ಪಕ್ಷಪಾತ, ಅಧಿಕಾರ ದುರುಪಯೋಗ, ನೇಮಕಾತಿ ಅವ್ಯವಹಾರ–ನಾಗರಾಜ್ ಯಾದವ್ ಗಂಭೀರ ಆರೋಪ

ಬೆಳಗಾವಿ : ವಿಧಾನ ಪರಿಷತ್​​ ಸಭಾಪತಿ ಬಸವರಾಜ್​ ಹೊರಟ್ಟಿ ಮೇಲೆ ಸದಸ್ಯ ನಾಗರಾಜ್ ಯಾದವ್ ಆರೋಪಗಳ ಸುರಿಮಳೆ ಮಾಡಿದ್ದಾರೆ. ಬಸವರಾಜ್ ಹೊರಟ್ಟಿ ಪಕ್ಷಾತೀತವಾಗಿ ನಡೆದುಕೊಳ್ತಾ ಇಲ್ಲ ಎಂದು ಆರೋಪಿಸಿರುವ ಅವರು, ವಿಧಾನ ಪರಿಷತ್ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಇತ್ತ ತಮ್ಮ ಮೇಲಿನ ಆರೋಪಗಳಿಗೆ ಗರಂ ಆಗಿರುವ ಹೊರಟ್ಟಿ, ನಾಗರಾಜ್​​ ಯಾದವ್​​ ಹೇಳಿರೋದನ್ನು ಸಾಬೀತು ಮಾಡಿದರೆ ನಾನು ಈ ಕುರ್ಚಿಯಲ್ಲಿ ಒಂದೇ ಒಂದು ನಿಮಿಷ ಕೂರುವುದಿಲ್ಲ ಎಂದು ಸವಾಲು ಹಾಕಿದ್ದಾರೆ.

ಸಭಾಪತಿ ಎಲ್ಲ ಪಕ್ಷದ ಪರ ಇರಬೇಕು. ಆದರೆ ಬಸವರಾಜ್​ ಹೊರಟ್ಟಿ ಅವರು ಆಡಳಿತ ಪಕ್ಷಕ್ಕೆ ಒಂದು, ವಿಪಕ್ಷಗಳಿಗೆ ಮತ್ತೊಂದು ಎಂಬ ರೀತಿ ಮಾಡುತ್ತಿದ್ದಾರೆ. ಬಿಜೆಪಿಯವರನ್ನು ಓಲೈಕೆ ಮಾಡಲು ನಮಗೆ ಮಾತನಾಡಲು ಅವಕಾಶ ಕೊಡ್ತಿಲ್ಲ. ಆ ಮೂಲಕ ಹೊರಟ್ಟಿ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ತಮ್ಮ ಕೈ ಕೆಳಗೆ ಕೆಲಸ ಮಾಡುವ ನೌಕರರ ಫೋನ್​​ಕಾಲ್ ಲಿಸ್ಟ್​​ಗಳನ್ನು ಅವರು ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರಲಿದೆ. ಜೊತೆಗೆ ನೇಮಕಾತಿಗಳಲ್ಲಿಯೂ ಹೊರಟ್ಟಿ ಅವ್ಯವಹಾರ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿದ್ದ ಬಗ್ಗೆ ಬಗ್ಗೆ ದೂರು ಕೊಟ್ಟಾಗ ನಾನು ಆ ಮಾತು ಕೇಳಿಸಿಕೊಂಡಿಲ್ಲ ಅಂದಿದ್ದರು. ನೈತಿಕತೆ ಕಳೆದುಕೊಂಡ ಮೇಲೆ ಅವರು ರಾಜೀನಾಮೆ ಕೊಟ್ಟು ಹೋಗುವುದು ಸೂಕ್ತ ಎಂದು ನಾಗರಾಜ್​​ ಯಾದವ್​​ ಹೇಳಿದ್ದಾರೆ.

ಅಲ್ಲದೆ ಸಭಾಪತಿ ಹೊರಟ್ಟಿ ಅವರ ಮೇಲೆ ಆವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದ್ದು, ಪಕ್ಷ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿದೆ. ಸಂಖ್ಯಾಬಲದ ಬಗ್ಗೆ ಮಾತಾಡುವುದಾದರೆ ಲಖನ್ ಜಾರಕಿಹೊಳಿ ಮತ ಮುಖ್ಯ ಆಗಲಿದೆ. ನಮ್ಮ ಸರ್ಕಾರ ಬಂದು ಎರಡು ವರ್ಷಗಳಾದ್ರು ಇನ್ನೂ ಏಕೆ ಬಿಜೆಪಿಯವರನ್ನು ಸಭಾಪತಿ ಆಗಿ ಇಟ್ಟುಕೊಳ್ಳಬೇಕು? ನಮ್ಮ ಮಸೂದೆಗಳು ಪಾಸ್ ಆಗಬೇಕಾದ್ರೆ, ನಮ್ಮ ವಿಚಾರಗಳು ಚರ್ಚೆ ಆಗಬೇಕು ಅಂದ್ರೆ ಪಕ್ಷಾತೀತ ಸಭಾಪತಿ ಬೇಕು ಎಂದು ನಾಗರಾಜ್​​ ಯಾದವ್​​ ಆಗ್ರಹಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *