ಸಚಿವರು, ಸಂಸದರಿಗೆ ಹಣ ಸಂದಾಯ: ಬಿಜೆಪಿ ಆರೋಪ
ಬಳ್ಳಾರಿ : ಕರ್ನಾಟಕದ ಯಾವುದೇ ಭಾಗಕ್ಕೆ ಹೋದರೂ ಟೋಲ್ಗಳಲ್ಲಿ ಫಾಸ್ಟ್ಟ್ಯಾಗ್ ಪಾವತಿ ವ್ಯವಸ್ಥೆ ಇರುವುದನ್ನು ನೋಡಿರುತ್ತೇವೆ. ಆದರೆ, ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದ ಹೊಸಪೇಟೆ ರಸ್ತೆ ಬಳಿ ಇರುವ ಟೋಲ್ ಪ್ಲಾಜಾದಲ್ಲಿ ಫಾಸ್ಟ್ಟ್ಯಾಗ್ ಪಾವತಿ ವ್ಯವಸ್ಥೆಯೇ ಇಲ್ಲ. ಇಲ್ಲಿ ಕೇವಲ ನಗದು ಹಣದ ಮೂಲಕ ಮಾತ್ರ ವ್ಯವಹಾರ ನಡೆಯುತ್ತದೆ. ಲೆಕ್ಕವಿಲ್ಲ, ಪತ್ರವಿಲ್ಲ. ಈ ಟೋಲ್ ಪ್ಲಾಜಾದಲ್ಲಿ ಪ್ರತಿನಿತ್ಯ 10 ರಿಂದ 15 ಲಕ್ಷ ರೂ. ಸಂಗ್ರಹ ಆಗುವ ಅಂದಾಜಿದೆ. ಆದರೆ, ಸರ್ಕಾರಕ್ಕೆ ಕೇವಲ 1 ರಿಂದ 2 ಲಕ್ಷ ರೂ. ಮಾತ್ರ ಪಾವತಿ ಮಾಡಲಾಗುತ್ತಿದೆ.
ಸಚಿವರು, ಸಂಸದರಿಗೆ ಹಣ ಸಂದಾಯ: ಬಿಜೆಪಿ ಆರೋಪ
ಫಾಸ್ಟ್ಟ್ಯಾಗ್ ಇಲ್ಲದ ಈ ಟೋಲ್ ಮೂಲಕ ಹಣ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪ ಈಗ ಕೇಳಿಬಂದಿದೆ. ಈ ಟೋಲ್ ಪ್ಲಾಜಾದಿಂದ ಸಚಿವ ಸಂತೋಷ ಲಾಡ್, ಸಂಸದ ಇ. ತುಕಾರಾಂಗೆ ಹಣ ಹೋಗುತ್ತಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧಕ್ಷ ಬಂಗಾರು ಹನುಮಂತ ಆರೋಪಿಸಿದ್ದಾರೆ.
ಈ ಟೋಲ್ KRDCL ಸಂಸ್ಥೆ ವ್ಯಾಪ್ತಿಗೆ ಬರುತ್ತದೆ. ಅಲ್ಲಿ ನಿತ್ಯ ಓಡಾಡುವ ಸಾವಿರಾರು ಗಣಿ ಲಾರಿಗಳಿಂದ ಟೋಲ್ ಸಂಗ್ರಹ ಮಾಡಲಾಗುತ್ತದೆ. ಹೀಗೆ ಲಕ್ಷಾಂತರ ರೂಪಾಯಿ ಹಣ ಸಂಗ್ರಹ ಆಗುತ್ತದೆ. ಆದರೆ, ಸರ್ಕಾರಕ್ಕೆ ಕೋಡುವುದು ಮಾತ್ರ ಕೇವಲ 1 ಲಕ್ಷ ರೂ.ನಿಂದ 1.5 ಲಕ್ಷ ರೂ. ಮಾತ್ರ. ಉಳಿದ ಹಣ ಸಚಿವ ಸಂತೋಷ ಲಾಡ್, ಸಂಸದ ಈ ತುಕಾರಾಂ ಅವರ ಜೇಬಿಗೆ ಹೋಗುತ್ತದೆ ಎಂದು ಬಂಗಾರು ಹನುಮಂತ ಗಂಭೀರ ಆರೋಪ ಮಾಡಿದ್ದಾರೆ.
For More Updates Join our WhatsApp Group :




