ಬೆಂಗಳೂರು: ರಾಜ್ಯದಲ್ಲಿ ಹೃದಯಘಾತದಿಂದ ಸರಣಿ ಸಾವು ಸಂಭವಿಸುತ್ತಿರುವುದು ಸರ್ಕಾರದ ನಿದ್ದೆಗೆಡಿಸಿದೆ. ರಾಜ್ಯ ಹಾಗೂ ಹಾಸನದಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಪ್ರಕರಣಗಳ ಅಧ್ಯಯನಕ್ಕೆ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿ ರಚಿಸಿದೆ. ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತಕ್ಕೆ ಕಾರಣವೇನು ಎಂಬವುದು ತಜ್ಞರು ಅಧ್ಯಯನ ನಡೆಸಿ ಸಿದ್ದಪಡಿಸಿರುವ ವರದಿಯಲ್ಲಿ ಅಡಕವಾಗಿದೆ. ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆಯಾಗಿವೆ.

ವರದಿಯಲ್ಲಿ ಏನಿದೆ?
ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ ಸಿದ್ದಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳು ಅಡಕವಾಗಿವೆ. ವರದಿಯಲ್ಲಿ ಏನಿದೆ ಎಂಬುವುದು ಟಿವಿ9ಗೆ ಮೂಲಗಳಿಂದ ಮಾಹಿತಿ ದೊರೆತಿದೆ. ಕರೋನಾ ರೋಗದಿಂದ ಗುಣಮುಖರಾದವರಿಗೆ ಕೊಂಚ ಹೃದಯ ಸಮಸ್ಯೆ ಕಾಡುತ್ತಿದೆ. ಹೃದಯಘಾತಕ್ಕೆ ಕರೋನಾ ಲಸಿಕೆ ಕಾರಣವಲ್ಲ. ಆದರೆ, ಕರೋನಾ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ ಎಂದು ವರದಿಯಲ್ಲಿದೆ.
ವರದಿಯಲ್ಲಿ ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆಯೂ ಉಲ್ಲೇಖ ಮಾಡಲು ತಜ್ಞರು ಮುಂದಾಗಿದ್ದಾರೆ. ಕರೋನಾ ಬಂದು ಹೋದ ಮೂರು ವರ್ಷದ ಬಳಿಕ ಹೃದಯ ಸಮಸ್ಯೆ ಕಂಡು ಬರುತ್ತಿದೆ. ಅಲ್ಲದೆ, ಕರೋನಾ ರೋಗದಿಂದ ಗುಣಮುಖರಾದವರಿಗೆ ನಿದ್ರಾಹೀನತೆ, ಸುಸ್ತು, ಉಸಿರಾಟದ ಸಮಸ್ಯೆ ಅತಿಯಾದ ಬೊಜ್ಜು ಕಂಡು ಬರುತ್ತಿದ್ದು, ತಜ್ಞರು ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಲು ಮುಂದಾಗಿದ್ದಾರೆ.
ತಜ್ಞರ ಸಲಹೆಗಳೇನು?
• ಸಕ್ಕರೆ ಹಾಗು ಉಪ್ಪಿನ ಪ್ರಮಾಣ ಕಡಿಮೆ ಮಾಡಬೇಕು
• ಕನಿಷ್ಠ 6 ಗಂಟೆ ನಿದ್ದೆ ಮಾಡಬೇಕು
• ಮಕ್ಕಳ ಸ್ಕ್ರೀನಿಂಗ್ ಟೈಮ್ ಕಡಿಮೆ ಮಾಡಬೇಕು
• ರಾಜ್ಯದಲ್ಲಿ ಆಗುವ ಪ್ರತಿ ಯುವಕರ ಹಠಾತ್ ಸಾವು ರಿಜಿಸ್ಟರ್ ಆಗಬೇಕು
• ಹೃದಯಘಾತದ ಮರಣತ್ತೋರ ಪರೀಕ್ಷೆ ಆಗಬೇಕು
• ಒತ್ತಡ ಕಡಿಮೆ ಮಾಡಬೇಕು
• ದೈಹಿಕ ಚಟ್ಟುವಟಿಕೆಗಳನ್ನು ಹೆಚ್ಚಿಸಬೇಕು
• ಧೂಮಪಾನ ಕಡ್ಡಾಯವಾಗಿ ಬ್ಯಾನ್ ಮಾಡಬೇಕು
• 18 ವರ್ಷ ಒಳಗಿನವರಿಗೆ ಧೂಮಪಾನ ಮತ್ತು ಮದ್ಯಪಾನ ಮಾರಟಕ್ಕೆ ಕಡಿವಾಣ ಹಾಕಬೇಕು.
• ಅಪಾಯಕಾರಿ ಪೇನ್ ಕ್ಲಿಲ್ಲರ್ ಔಷಧಿಗೆ ಕಡಿವಾಣ ಹಾಕಬೇಕು.
• CPR ತರಬೇತಿ ನೀಡುವ ಯೋಜನೆ ಜಾರಿ ಹಾಗೂ ಜಾಗೃತಿ ಮೂಡಿಸಬೇಕು
• ಸ್ಟೆಮಿ ಯೋಜನೆಯನ್ನು ಎಲ್ಲ ತಾಲೂಕುಗಳಿಗೆ ವಿಸ್ತರಣೆ ಮಾಡಬೇಕು.
• ECG, TMT, ECHO, Lipid Profile ಚಿಕಿತ್ಸಾ ಸೌಲಭ್ಯ
• ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ CT Angiogram ಟೆಸ್ಟ್ ವ್ಯವಸ್ಥೆ
• ಸಾರ್ವಜನಿಕ ಪ್ರದೇಶಗಳಲ್ಲಿ ಹೃದಯಘಾತದ ಬಗ್ಗೆ ಜಾಗೃತಿ ಮೂಡಿಸುವುದು
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಇಂದು ಹೃದಯಘಾತದ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಹೃದಯಾಘಾತದ ಬಗ್ಗೆ ಸಿದ್ದವಾಗಿರುವ ವರದಿಯ ಬಗ್ಗೆ ತಾಂತ್ರಿಕ ಸಮಿತಿ ಸದಸ್ಯರು ಚರ್ಚಿಸಿದರು. ಅಂತಿಮ ವರದಿಯಲ್ಲಿನ ಸಾಧಕ-ಬಾಧಕಗಳ ಕುರಿತು ಚರ್ಚಿಸಲಾಯಿತು. ತಜ್ಞರು ವರದಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಏಕಾಏಕಿ ಹೃದಯಾಘಾತಕ್ಕೆ ಕಾರಣಗಳೇನು ಎಂಬುವುದನ್ನು ತಜ್ಞರು ಪತ್ತೆ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ವರದಿ ನೀಡಲು ಮುಂದಾಗಿದ್ದಾರೆ. ಎರಡು ದಿನಗಳಲ್ಲಿ ತಜ್ಞರು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಬಳಿಕ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇ