ದೇಪಾಪುರ ಬಳಿ ಬೋನಿಗೆ ಬಿದ್ದ ಹುಲಿರಾಯ.
ಚಾಮರಾಜನಗರ : ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು ಜನರನ್ನು ನೋಡಿ ಬೋನಿನಲ್ಲಿದ್ದ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ ಜನರು ಕೂಡ ಬೆಚ್ಚಿಬಿದ್ದಿದ್ದಾರೆ. ಕಳೆದ ಎರೆಡು ಮೂರು ತಿಂಗಳಿಂದ ಆಗಾಗ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಹುಲಿ, ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಇದೀಗ ಸ್ಥಳಕ್ಕೆ ಧಾವಿಸಿದ್ದಾರೆ.
For More Updates Join our WhatsApp Group :




