ಬೆಳಗಾವಿ : ಜಿಲ್ಲೆಯಲ್ಲಿ ಮಾಸ್ಕ್ ಇಲ್ಲದೆ ಓಡಾಡುವ ಸಾರ್ವಜನಿಕರಿಗೆ ಹೂವಿನ ಹಾರ ಹಾಕಿ, ಸ್ಥಳದಲ್ಲೇ ಕೋವಿಡ್ ಪರೀಕ್ಷೆ ನಡೆಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಹೊಸ ಐಡಿಯಾ ಮಾಡಿಕೊಂಡಿದ್ದಾರೆ.
ರಾಜ್ಯದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಇನ್ನು ಇದರ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿರ್ಧಾಗಳನ್ನು ಸಹ ತೆಗೆದುಕೊಳ್ಳುತ್ತದೆ, ಆದರೆ ಜನರು ಮಾತ್ರ ಕೊರೊನಾವೇ ಇಲ್ಲವೆಂಬಂತೆ ಹೊರಗಡೆ ಸುತ್ತಾಡುತ್ತಿರುವುದು ಕಂಡು ಬರುತ್ತಿದೆ.
![](http://pragatitv.in/wp-content/uploads/2021/04/jeeva-web-new-1024x576.jpg)
ಇದನ್ನು ಕಂಡು ಜನರಿಗೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸದೆ ಬಂದ ಮಹಾನುಭಾವರಿಗೆ ಹಾರ ಹಾಕಿ, ಕೋವಿಡ್ ಪರೀಕ್ಷೆಯನ್ನು ಸ್ಥಳದಲ್ಲೇ ಅಧಿಕಾರಿಗಳು ನಡೆಸಿದ್ದಾರೆ.
ಅಥಣಿ ತಹಶೀಲ್ದಾರ್ ದುಂಡಪ್ಪಾ ಕೋಮಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸಾರ್ವಜನಿಕರು ಬೇಡ ಬೇಡ ಎಂದರೂ ಬಿಡದೇ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಿ ಕೊರೊನಾ ಜಾಗೃತಿ ಜೊತೆಗೆ ಕಠಿಣ ನಿಯಮಗಳನ್ನು ಅಥಣಿ ತಾಲೂಕಾಡಳಿತ ಜಾರಿಗೊಳಿಸಿದೆ.
![](http://pragatitv.in/wp-content/uploads/2021/04/Jeeni-web-ad-d-1024x576.jpg)
ಮಾಸ್ಕ್ ಇಲ್ಲದ ಬೈಕ್ ಸವಾರರಿಗೆ ಸರಿಯಾದ ಪಾಠ ಕಲಿಸುವದರ ಜೊತೆಗೆ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿಯಾಗಿ ಓಡಾಡುವವರಿಗೆ ತಾಲೂಕಾಡಳಿತ ಬಿಸಿ ಮುಟ್ಟಿಸಿದೆ. ಕೊರೊನಾ ಜಾಗೃತಿ ಕಾರ್ಯಾಚರಣೆಯಲ್ಲಿ ಪುರಸಭೆ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭಾಗಿಯಾಗಿದ್ದರು.
Pragati TV Social Connect for more latest u