ಬೆಂಗಳೂರು ಸಂಚಾರ ನಿಯಮ ಉಲ್ಲಂಘನೆ ಭಾರೀ ಏರಿಕೆ.

ಬೆಂಗಳೂರು ಸಂಚಾರ ನಿಯಮ ಉಲ್ಲಂಘನೆ ಭಾರೀ ಏರಿಕೆ.

ವಾಹನ ಸವಾರರಿಗೆ ಬಿಗ್ ಶಾಕ್.

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಬಿಗ್​​ ಶಾಕ್​​​ ನೀಡುವ ವರದಿಯೊಂದು ಬಿಡುಗಡೆಯಾಗಿದೆ. ಇದು ವಾಹನ ಸವಾರರಿಗೆ ಎಚ್ಚರಿಕೆಯ ಸಂದೇಶ ಕೂಡ ಆಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮತ್ತು ತಪ್ಪು ದಿಕ್ಕಿನಲ್ಲಿ ಚಾಲನೆ , ವಿವಿಧ ವಿಭಾಗಗಳಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ ಸಂಚಾರ ಪೊಲೀಸರು ದಾಖಲಿಸಿರುವ ಪ್ರಕರಣಗಳ ಸಂಖ್ಯೆ 2024 ಕ್ಕೆ ಹೋಲಿಸಿದರೆ 2025ರಲ್ಲಿ ಶೇಕಡಾ 82 ರಷ್ಟು ಹೆಚ್ಚಾಗಿದೆ. ಡೆಕ್ಕನ್ ಹೆರಾಲ್ಡ್ ವರದಿ ಮಾಡಿರುವ ಪ್ರಕಾರ, 2025ರಲ್ಲಿ ಸುಮಾರು 6,872 ಪ್ರಕರಣಗಳು ದಾಖಲಾಗಿವೆ. ಇದು 2024ರಲ್ಲಿ ಹೊಲಿಸಿದರೆ ಈ ವರ್ಷ 3,774 ಪ್ರಕರಣಗಳು ಹೆಚ್ಚಾಗಿದೆ.

ಈ ಪ್ರಕರಣಗಳನ್ನು ಪತ್ತೆ ಹಚ್ಚಲು ಪೊಲೀಸರು ಹಲವು ಕ್ರಮವನ್ನು ತೆಗೆದುಕೊಂಡಿದ್ದಾರೆ. ಸಂಚಾರ ನಿಮಯಗಳನ್ನು ತಡೆಗಟ್ಟವ ನಿಟ್ಟಿನಲ್ಲಿ ಪೊಲೀಸರು ಕೇಸ್​​ ದಾಖಲಿಸಿಕೊಂಡಿದ್ದಾರೆ. ಆದರೆ ವಾಹನ ಸವಾರರು ದಿನದಿಂದ ದಿನಕ್ಕೆ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತ ಇದ್ದಾರೆ. ಬಿಎನ್ಎಸ್​​ನ 285ರ ಅಡಿಯಲ್ಲಿ, ಸಂಚಾರಕ್ಕೆ ಅಡ್ಡಿಯುಂಟು ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳುವ ಅವಕಾಶ ಇದೆ. ಅನೇಕ ಸಂದರ್ಭಗಳಲ್ಲಿ, ಸವಾರರು ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸುತ್ತಾರೆ. ಇದು ಕೂಡ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತದೆ. ಇದಕ್ಕೂ ಕೂಡ ಕ್ರಮವನ್ನು ತೆಗೆದುಕೊಂಡಿದ್ದೇವೆ. ಇನ್ನು ಪ್ರಕರಣವನ್ನು ದಾಖಲಿಸುವುದು ಸಂಚಾರ ದಟ್ಟಣೆ ಉಂಟಾದಾಗ ಮಾತ್ರ, ಇಲ್ಲವೆಂದರೆ ಚಲನ್ ನೀಡಲಾಗುತ್ತದೆ ಮತ್ತು ದಂಡವನ್ನು ಸಂಗ್ರಹಿಸಲಾಗುತ್ತದೆ ಎಂದು ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಕಾರ್ತಿಕ್ ರೆಡ್ಡಿ ಡಿಎಚ್‌ಗೆ ತಿಳಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *