ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಆನೆ ಮಾವುತರಿಗೆ ಸನ್ಮಾನ

ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಆನೆ ಮಾವುತರಿಗೆ ಸನ್ಮಾನ

ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾದ ತುಮಕೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ   ಕರಿಬಸವೇಶ್ವರ ಮಠದ  ಲಕ್ಷ್ಮಿ ಆನೆಯ ಮಾವುತ ಸಲೀಮ್ ಬಾಷ ಹಾಗೂ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ನೊಣವಿನಕೆರೆ ಮಠದ ಲಕ್ಷ್ಮಿ ಆನೆಯ ಮಾವುತ ಗಂಗಾಧರ್ ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಉಪ ವಲಯ ಅರಣ್ಯಾಧಿಕಾರಿ ರಬ್ಬಾನಿ, ವಲಯ ಅರಣ್ಯಾಧಿಕಾರಿ ನಮಿತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *