ತುಮಕೂರು: ಶೌಚಾಲಯಕ್ಕೆ ತೆರಳಿದ್ದಾಗ ವಿದ್ಯುತ್ ಶಾಕ್ ಹೊಡೆದು 9 ವರ್ಷದ ಬಾಲಕ ಬಲಿಯಾಗಿದ್ದಾನೆ. ಕುಶಾಲ್ (9) ಮೃತ ಬಾಲಕನಾಗಿದ್ದು,

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಘಟನೆ ನಡೆದಿದೆ.
ಸೋಮನಹಳ್ಳಿ ಗ್ರಾಮದ ಮಹೇಶ್ ಪುತ್ರ ಕುಶಾಲ್ ಮೃತ ಬಾಲಕನಾಗಿದ್ದಾನೆ. ಸೋಮವಾರ ರಾತ್ರಿ ಮನೆ ಬಳಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಮನೆ ಬಳಿ ಹಾದುಹೋಗಿರುವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿದ್ದಾನೆ.
ಹಲವು ಬಾರಿ ವಿದ್ಯುತ್ ತಂತಿ ಸರಿಪಡಿಸುವಂತೆ ಮನವಿ ಮಾಡಿದ್ದ ಗ್ರಾಮಸ್ಥರು. ಆದರೆ, ಬೆಸ್ಕಾಂ ಇಲಾಖೆ ನಿರ್ಲಕ್ಷ್ಯ ತಾಳಿತ್ತು. ಬಾಲಕನ ಸಾವಿಗೆ ಬೆಸ್ಕಾಂ ಹಾಗೂ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೆ ಕಾರಣ ಎಂದು ಆರೋಪ ಮಾಡಿದ್ದಾರೆ ಗ್ರಾಮಸ್ಥರು.
ಬಾಲಕನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.