ತುಮಕೂರು : ತುಮಕೂರಿನ ಮಹಾ ನಗರ ಪಾಲಿಕೆ ಬಳಿ ಪ್ರತಿಭಟನೆ ನಡೆಸಿದ ಮಾದಿಗ ಸಮಾಜ ಸಂಘಟನೆ ಮುಖಂಡರು, ಪಾಲಿಕೆ ಆವರಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ಮಾಡಲು ಒತ್ತಾಯಿಸಿದ್ರು.
ಸಂಘಟನೆ ರಾಜ್ಯಾಧ್ಯಕ್ಷ ಮಂಜುನಾಥ್ ಮಾತನಾಡಿ, ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ಮಾಡಿ ಹತ್ತು ವರ್ಷಗಳಾದರೂ ಮೂರ್ತಿ ಅನಾವರಣಕ್ಕೆ ಪಾಲಿಕೆ ಆಡಳಿತ ಕ್ರಮ ತೆಗೆದುಕೊಂಡಿಲ್ಲ. ಕೂಡಲೇ ಈ ಸಂಬಂಧ ಸಮಿತಿ ರಚಿಸಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಬೇಕು ಇಲ್ಲವಾದಲ್ಲಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ರೀತಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಬಳಿ ಅಂಬೇಡ್ಕರ್ ಪುತ್ಥಳಿ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.
Pragati TV Social Connect for more latest u