ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ದಾವಣಗೆರೆ ಚೆನ್ನಗಿರಿ ತಾಲ್ಲೂಕಿನ ರುದ್ರಪುರದಿಂದ ಬೆಂಗಳೂರಿಗೆ ದ್ವಿಚಕ್ರವಾಹನದಲ್ಲಿ ನವೀನ್ಕುಮಾರ್ ಹಾಗೂ ಪೂರ್ಣಿಮಾ ತೆರಳುತ್ತಿದ್ದರು.
ಈ ವೇಳೆ ಬೈಕ್ ಹಾಗೂ ಲಾರಿ ಡಿಕ್ಕಿಯಾಗಿದ್ದು, ಪೂರ್ಣಿಮಾ ಸ್ಥಳದಲ್ಲೆ ಸಾವನ್ನಪ್ಪಿದ್ದರೆ, ನವೀನ್ಕುಮಾರ್ ಗಂಭೀರಗಾಯಗೊAಡು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.