ತುಮಕೂರು : ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಣೆ ಮಾಡುವಲ್ಲಿ ಸ್ಥಳೀಯ ಯುವಕರು ಯಶಸ್ವಿಯಾಗಿ ಮಾನವೀಯತೆ ಮೆರೆದಿದ್ದಾರೆ.
![](http://pragatitv.in/wp-content/uploads/2021/04/jeeva-web-new-1024x576.jpg)
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಹೊಸಕೆರೆ ಕೋಡಿ ನೀರಿನಲ್ಲಿ ಇಬ್ಬರು ಬಾಲಕಿಯರು ಆಟವಾಡಲು ಇಳಿದಿದ್ದರು ಎನ್ನಲಾಗಿದೆ. ಈ ವೇಳೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ದು ಇದಕ್ಕೆ ಸಿಲುಕಿಕೊಂಡ ಬಾಲಕಿಯರು ಕೊಚ್ಚಿ ಹೋಗುತ್ತಿದ್ದರು.
ಸ್ಥಳೀಯ ಯುವಕರು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಬಾಲಕಿಯರನ್ನು ರಕ್ಷಣೆ ಮಾಡಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
![](http://pragatitv.in/wp-content/uploads/2021/08/jeeni-new-wed-ad-1024x576.jpg)
ಇನ್ನು ತುಮಕೂರು ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿ ಇರಬೇಕಾಗಿದೆ.
Pragati TV Social Connect for more latest u