ತುಮಕೂರು || ಲೋಕಸಭಾ ಚುನಾವಣೆ ಮತ ಎಣಿಕೆ : ಈ ದಿನ ಈ ರಸ್ತೆ ಬಂದ್… ಬಂದ್!

ತುಮಕೂರು: ಜಿಲ್ಲೆಯಲ್ಲಿ ಕಳೆದ ಏಪ್ರಿಲ್ 26ರಂದು ಜರುಗಿದ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 4 ರಂದು ಸುಗಮವಾಗಿ ಮತ ಎಣ ಕಾ ಕಾರ್ಯ ನಡೆಸಲು ಎಣ ಕಾ ಕೊಠಡಿ, ಎಣ ಕಾ ಟೇಬಲ್, ಅಗತ್ಯ ಅಧಿಕಾರಿ/ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಬೆಳಿಗ್ಗೆ 8 ರಿಂದ ಎಣ ಕಾ ಕಾರ್ಯ
ತಮ್ಮ ಕಚೇರಿಯಲ್ಲಿ ಶನಿವಾರ ಲೋಕಸಭಾ ಕ್ಷೇತ್ರದ ಮತ ಎಣ ಕೆ ಪ್ರಕ್ರಿಯೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೊಳಪಡುವ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಮತ ಎಣ ಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣ ಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜೂನ್ ೪ರಂದು ಬೆಳಿಗ್ಗೆ 8 ಗಂಟೆಯಿಂದ ನಡೆಸಲಾಗುವುದು ಎಂದು ಹೇಳಿದರು.

೪೪೮ ಅಧಿಕಾರಿ/ಸಿಬ್ಬಂದಿಗಳ ನಿಯೋಜನೆ :-
ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ೮ ವಿಧಾನಸಭಾ ಕ್ಷೇತ್ರಗಳು ಒಳಪಡಲಿದ್ದು, ಈ ವ್ಯಾಪ್ತಿಯ ಒಟ್ಟು ೧೮೪೬ ಮತಗಟ್ಟೆಗಳಲ್ಲಿ ನಡೆದ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಮೂಲಕ ೧೨,೯೬,೭೨೦ ಮತದಾರರು ಮತದಾನ ಮಾಡಿದ್ದಾರೆ. ಅಲ್ಲದೆ ಮನೆಯಿಂದ ಮತದಾನ ಮಾಡಿದ ೮೦ ವರ್ಷ ಮೇಲ್ಪಟ್ಟ ೨೯೩೩ ಮತದಾರರು, ಶೇ.೪೦ಕ್ಕಿಂತ ಹೆಚ್ಚಿನ ಪ್ರಮಾಣದ ಅಂಗವೈಕಲ್ಯ ಹೊಂದಿರುವ ೮೭೮ ವಿಕಲಚೇತನರು, ೫೪೫ ಅಗತ್ಯ ಸೇವೆಯಲ್ಲಿರುವ, ೩೦೨೩ ಚುನಾವಣಾ ಕರ್ತವ್ಯ ನಿಯೋಜಿತ ಹಾಗೂ ೨೭೪ ಸೇವಾ ಮತದಾರರು ಸೇರಿ ೭೬೫೩ ಮತದಾರರು ಅಂಚೆ ಮತದಾನದ ಮೂಲಕ ಮತದಾನ ಮಾಡಿದ್ದಾರೆ. ಸೇವಾ ಮತದಾರರಿಂದ ಮತಪತ್ರವನ್ನು ಸ್ವೀಕರಿಸಲು ಜೂನ್ ೪ರ ಬೆಳಿಗ್ಗೆ ೭.೫೯ ನಿಮಿಷದವರೆಗೂ ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೧೪ ಟೇಬಲ್‌ನಂತೆ ಒಟ್ಟು ೧೧೨ ಟೇಬಲ್, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್ ಎಣ ಕೆಗಾಗಿ ೧೯(೧೮+೧) ಟೇಬಲ್ ಸೇರಿದಂತೆ ಒಟ್ಟು ೧೩೧ ಟೇಬಲ್‌ಗಳಲ್ಲಿ ಮತ ಎಣ ಕೆಯನ್ನು ನಡೆಸಲಾಗುವುದು. ಅಂಚೆ ಮತಪತ್ರಗಳ ಎಣ ಕೆಗಾಗಿ ೨ ಕೊಠಡಿಯಲ್ಲಿ ೧೮ ಎಣ ಕಾ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ತಲಾ ಒಬ್ಬರು ಸಹಾಯಕ ಚುನಾವಣಾ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಇದಕ್ಕಾಗಿ ಒಟ್ಟು ೪೪೮ ಎಣ ಕಾ ಮೇಲ್ವಿಚಾರಕರು, ಎಣ ಕಾ ಸಹಾಯಕರು ಹಾಗೂ ಸೂಕ್ಷö್ಮ ವೀಕ್ಷಕರನ್ನು ನಿಯೋಜಿಸಲಾಗಿದ್ದು, ಎಣ ಕಾ ಕಾರ್ಯಕ್ಕೆ ನಿಯೋಜಿಸಿದವರಿಗೆ ಈಗಾಗಲೇ ೨ ಹಂತದ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಮಧುಗಿರಿ, ತುಮಕೂರು ಗ್ರಾಮಾಂತರ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರಗಳ ಮತ ಎಣ ಕೆಯನ್ನು ತಲಾ ೨ ಕೊಠಡಿಗಳಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳ ಮತ ಎಣ ಕೆಯನ್ನು ತಲಾ ೧ ಕೊಠಡಿಯಲ್ಲಿ ಮಾಡಲಾಗುವುದು. ಪ್ರತಿ ಎಣ ಕಾ ಕೊಠಡಿಗೂ ಗೆಜೆಟೆಡ್ ಅಧಿಕಾರಿಯನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಪ್ರತಿ ಎಣ ಕಾ ಸುತ್ತಿನ ಅಂಕಿ ಅಂಶಗಳನ್ನು ಸಾಫ್ಟ್ವೇರ್‌ನಲ್ಲಿ ಎಂಟ್ರಿ ಮಾಡಿ ಅಪ್‌ಲೋಡ್ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು ಸಾಫ್ಟ್ವೇರ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಅಧಿಕೃತ ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ಪ್ರವೇಶ :-
ಮತ ಎಣ ಕಾ ಕಾರ್ಯಕ್ಕೆ ಅಭ್ಯರ್ಥಿಗಳು ನೇಮಕ ಮಾಡಿಕೊಂಡಿರುವ ಎಣಿಕಾ ಏಜೆಂಟರು ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ ಗುರುತಿನ ಚೀಟಿ ಪಡೆದುಕೊಳ್ಳತಕ್ಕದ್ದು. ಈಗಾಗಲೇ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ೩೪೦ ಎಣಕಾ ಏಜೆಂಟರುಗಳನ್ನು ನೇಮಕ ಮಾಡಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಲ್ಲಿಸಿದ್ದಾರೆ ಎಂದು ತಿಳಿಸಿದರಲ್ಲದೆ, ಮತ ಎಣ ಕಾ ಕೇಂದ್ರಗಳಿಗೆ ಅಧಿಕೃತ ಗುರುತಿನ ಚೀಟಿ ಹೊಂದಿರುವ ಮತ ಎಣ ಕೆ ಸಿಬ್ಬಂದಿ, ಅಭ್ಯರ್ಥಿಗಳ ಚುನಾವಣಾ ಏಜೆಂಟ್ ಹಾಗೂ ಮತ ಎಣ ಕಾ ಏಜೆಂಟರುಗಳನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

ಮೊಬೈಲ್, ಕ್ಯಾಮರಾ, ಕ್ಯಾಲ್‌ಕ್ಯುಲೇಟರ್, ಸ್ಮಾರ್ಟ್ ವಾಚ್, ಸ್ಮಾರ್ಟ್ ಪೆನ್, ಸಿಗರೇಟು, ಬೆಂಕಿಪೊಟ್ಟಣ, ಬೀಡಿ, ಮದ್ಯ, ನೀರು, ನೀರಿನ ಬಾಟಲ್, ಇಂಕ್‌ಪೆನ್, ತಂಬಾಕು ವಸ್ತುಗಳು, ಯಾವುದೇ ರೀತಿಯ ಆಯುಧ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತ ಎಣ ಕೆ ಕೇಂದ್ರದೊಳಗೆ ತರುವುದನ್ನು ನಿಷೇಧಿಸಿದೆ ಎಂದು ಮಾಹಿತಿ ನೀಡಿದರು.

ಮತ ಎಣ ಕೆ ಕಾರ್ಯವನ್ನು ವೀಕ್ಷಿಸಲು ವೀಕ್ಷಕರ ನೇಮಕ :-
ಜಿಲ್ಲೆಯ ಲೋಕಸಭಾ ಕ್ಷೇತ್ರದ ಮತ ಎಣ ಕೆಯು ಎರಡು ಕೇಂದ್ರಗಳಲ್ಲಿ ನಡೆಯಲಿದ್ದು, ಎಣ ಕಾ ಕಾರ್ಯವನ್ನು ವೀಕ್ಷಿಸಲು ಚುನಾವಣಾ ಆಯೋಗವು ಇಬ್ಬರು ವೀಕ್ಷಕರನ್ನು ನೇಮಿಸಿದೆ. ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಎಣ ಕಾ ಕೇಂದ್ರಕ್ಕೆ ಶಮ್ಮಿ ನಾಹಿದ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎಣ ಕಾ ಕೇಂದ್ರಕ್ಕೆ ಕೆ.ಎಸ್.ವಾಸವ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

೧ ಗಂಟೆ ಮೊದಲು ಹಾಜರಿರತಕ್ಕದ್ದು :-
ಮತ ಎಣ ಕಾ ಕಾರ್ಯವು ಜೂನ್ ೪ರಂದು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗಲಿದ್ದು, ಉಮೇದುವಾರರು ಮತ್ತು ಮತ ಎಣ ಕಾ ಏಜೆಂಟರುಗಳು ಮತ ಎಣ ಕಾ ಕಾರ್ಯ ಪ್ರಾರಂಭವಾಗುವ ಕನಿಷ್ಟ ೧ ಗಂಟೆ ಮೊದಲು ಎಣ ಕಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ತಿಳಿಸಿದರು.

ಮೊದಲು ಅಂಚೆ ಮತ ಪತ್ರಗಳ ಎಣ ಕೆ :-
ಭಾರತ ಚುನಾವಣಾ ಆಯೋಗದ ನಿಯಮದಂತೆ ಅಂಚೆ ಮತಪತ್ರಗಳ ಎಣ ಕೆಯನ್ನು ಮೊದಲು ಪ್ರಾರಂಭಿಸಿ ನಂತರ ವಿದ್ಯುನ್ಮಾನ ಮತ ಯಂತ್ರಗಳ ಮತ ಎಣ ಕೆಯನ್ನು ನಡೆಸಲಾಗುವುದು. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಮತ ಎಣ ಕೆ ನಡೆಸುವ ದೃಷ್ಟಿಯಿಂದ ಎಣ ಕಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಈ ರಸ್ತೆ ಅಂದು ಬಂದ್ ಆಗುತ್ತೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಮತ ಎಣ ಕಾ ಕೇಂದ್ರದ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಎಣ ಕಾ ಕೇಂದ್ರಕ್ಕೆ ರಾಜ್ಯ ಪೊಲೀಸ್, ಕೆಎಸ್‌ಆರ್‌ಪಿ, ಸಿಎಪಿಎಫ್ ಸೇರಿದಂತೆ ೩ ಸುತ್ತಿನ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ವ್ಯವಸ್ಥಿತವಾಗಿ ಮತ ಎಣ ಕೆ ನಡೆಸುವ ನಿಟ್ಟಿನಲ್ಲಿ ಮತ ಎಣ ಕಾ ಕೇಂದ್ರಕ್ಕೆ ಬಿಗಿ ಭದ್ರತೆಯನ್ನು ಒದಗಿಸಲು ೩೦೦ ಮಂದಿ ಹೆಚ್‌ಸಿ/ಪಿಸಿ, ೪೮ ಎಎಸ್‌ಐ, ೨೯ ಪಿಎಸ್‌ಐ, ೧೫ ಸಿಪಿಐ, ೪ ಡಿವೈ.ಎಸ್‌ಪಿ, ೧ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ೫ ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದೆ. ವಿಜೇತರು ಯಾವುದೇ ಮೆರವಣ ಗೆ, ವಿಜಯೋತ್ಸವ ನಡೆಸಲು ಅವಕಾಶವಿರುವುದಿಲ್ಲ. ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಚುನಾವಣೆ ಬಹಿರಂಗ ಪ್ರಚಾರದ ಸಂದರ್ಭದಲ್ಲಿ ಕುಣ ಗಲ್ ತಾಲ್ಲೂಕಿನಲ್ಲಿ ಕೆಲವು ಅಹಿತಕರ ಘಟನೆ ವರದಿಯಾಗಿರುವ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಜೂನ್ ೪ರಂದು ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಎಣಕಾ ಕೇಂದ್ರಕ್ಕೆ ಬಿಗಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜೂನ್ ೪ರಂದು ಡಾ: ಶಿವಕುಮಾರ ಸ್ವಾಮೀಜಿ ವೃತ್ತದಿಂದ ಬಟವಾಡಿ ಕಡೆಗೆ ಪಾದಚಾರಿ ಹಾಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಹಾಗೂ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನಡುವಿನ ಕುವೆಂಪು ನಗರ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮತ ಎಣ ಕಾ ಕೇಂದ್ರ ಪ್ರವೇಶಿಸುವವರು ಕುವೆಂಪು ನಗರದ ಕಡೆಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದ ಆವರಣದಲ್ಲಿ ಹಾಗೂ ಕೋತಿತೋಪು ರಸ್ತೆಯಲ್ಲಿ ವಾಹನಗಳ ನಿಲುಗಡೆ ಮಾಡಬಹುದಾಗಿದೆ. ಸರ್ಕಾರಿ ಪಾಲಿಟೆಕ್ನಿಕ್ ಹಿಂಭಾಗದ ಗೇಟ್ ಮೂಲಕ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ಎಣ ಕಾ ಕೇಂದ್ರದೊಳಗೆ ಪ್ರವೇಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *