ತುಮಕೂರು || ದಿಶಾ ಸಭೆಯಲ್ಲಿ ಗೈರಾದ ಅಧಿಕಾರಿಗಳ ಬೆವರಳಿಸಿದ ಸಂಸದ ಸೋಮಣ್ಣ

ತುಮಕೂರು || ದಿಶಾ ಸಭೆಯಲ್ಲಿ ಗೈರಾದ ಅಧಿಕಾರಿಗಳ ಬೆವರಳಿಸಿದ ಸಂಸದ ಸೋಮಣ್ಣ

ತುಮಕೂರು : ತುಮಕೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತುಮಕೂರು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ದ ಸಂಸದ ವಿ. ಸೋಮಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸುವುದಕ್ಕೆ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವುದಕ್ಕೆ, ಈ ಸಭೆಯನ್ನು ಆಯೋಜನೆ ಮಾಡಲಾಗುತ್ತಿದೆ. ಬಹು ಮುಖ್ಯವಾಗಿ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ವಾಸ್ತವ ಸ್ಥಿತಿಯನ್ನು ತಿಳಿಸಬೇಕು, ಆದರೆ ಇಲ್ಲಿ ಅಧಿಕಾರಿಗಳೇ ಇಲ್ಲ ಎಂದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರಿಗೆ ಸೂಚನೆ ನೀಡಿದ ಸಂಸದ ವಿ. ಸೋಮಣ್ಣ ಅವರು, ಯಾರೆಲ್ಲಾ ಗೈರು ಹಾಜರಾಗಿದ್ದಾರೆ ಅವರ ವಿರುದ್ಧವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *