ತುಮಕೂರು!! ತಾಯಿ ಕೊಂದಿದ್ದ ಮಗನಿಗೆ ಜೀವಾವಧಿ ಶಿಕ್ಷೆ

ತುಮಕೂರು!! ತಾಯಿ ಕೊಂದಿದ್ದ ಮಗನಿಗೆ ಜೀವಾವಧಿ ಶಿಕ್ಷೆ

ತುಮಕೂರು:- ಬುದ್ದಿವಾದ ಹೇಳಿದ ತಾಯಿಯನ್ನ ಕೊಲೆ ಮಾಡಿದ್ದ ಮಗನಿಗೆ  ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಲಯ ತೀರ್ಪು ನೀಡಿದೆ.

ಅಪರಾಧಿ ವಿರುಪಾಕ್ಷಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಕೊಟ್ಟಿದೆ.

ಕುಣಿಗಲ್ ತಾಲ್ಲೂಕು ಹಂಗರಹಳ್ಳಿ ಗ್ರಾಮದ ನಿವಾಸಿ ವಿರೂಪಾಕ್ಷ ಬುದ್ದಿವಾದ ಹೇಳಿದ್ದ ತಾಯಿ ಜಯಮ್ಮನ್ನ  2021 ಜನವರಿ 15ರಂದು ರಾತ್ರಿ ಕೊಲೆ ಮಾಡಿದ್ದ.

ಕೆಲಸ ಮಾಡದೆ ಮನೆಯಲ್ಲೇ ಇರುತ್ತಿದ್ದ ವಿರುಪಾಕ್ಷ. ಆದರೆ  ತಾಯಿ ಹೂ ಹಾಗೂ ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.

ಹಣ ನೀಡುವಂತೆ ಪದೇ ಪದೇ ತಾಯಿಯನ್ನ ಪೀಡಿಸಿ ಗಲಾಟೆ ಮಾಡುತ್ತಿದ್ದ ವಿರೂಪಾಕ್ಷ. ಹಣ ನೀಡಲು ನಿರಾಕರಿಸಿ ಬುದ್ಧಿವಾದ ಹೇಳಿದ್ದ ಜಯಮ್ಮ. ಹೀಗಾಗಿ

ಜಯಮ್ಮ ಮಲಗಿದ್ದ ವೇಳೆ ತಲೆ ಮೇಲೆ ಖಾರ ಅರೆಯುವ ಗುಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ.

ಈ ಸಂಬಂಧ‌ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿತ್ತು. ಅಂದಿನ ಸಿಪಿಐ ಗುರುಪ್ರಸಾದ್ ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪಣ ವರದಿ ಸಲ್ಲಿಸಿದ್ದರು. ವಾದ ವಿವಾದ ಆಲಿಸಿ  ನ್ಯಾ. ವೈ.ಎಲ್ ಲಡಖಾನ್ ಶಿಕ್ಷೆ ಪ್ರಕಟಿಸಿದ್ದಾರೆ.

ಐಪಿಸಿ 302 ಅಡಿಯಲ್ಲಿ ಕಠಿಣ ಕಾರಾಗೃಹ  ಶಿಕ್ಷೆ ಹಾಗೂ 50 ಸಾವಿರ ದಂಡವನ್ನು ನ್ಯಾಯಾಲಯ ವಿಧಿಸಿದೆ. ಸರ್ಕಾರಿ ವಕೀಲರಾದ ಟಿ.ಆರ ಅರುಣ್ ಹಾಗೂ ಕೆ.ಸಿ ದೀಪಕ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *