ತುಮಕೂರು || ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರ ದುರ್ಮರಣ

ಗುಬ್ಬಿ : ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ಕಡಬ ಬಳಿಯ ವರಣಸಂದ್ರ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಕವನ(7), ಯೋಕ್ಷಿತಾ(3) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರಿಯರಾಗಿದ್ದಾರೆ. ನಿನ್ನೆ ಸಂಜೆ ಈ ದುರ್ಘಟನೆ ನಡೆದಿದೆ. ಮನೆ ಬಳಿಯ ಕಟ್ಟೆಗೆ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

ತಾಯಿ ಮಂಜುಳಾ ಕಟ್ಟೆಯಲ್ಲಿ ಬಟ್ಟೆ ತೊಳೆಯುತ್ತಿದ್ದರು. ಈ ವೇಳೆ ಕವನ, ಯೋಕ್ಷಿತಾ ತಾಯಿ ಬಳಿ ತೆರಳಿದ್ದಾರೆ. ಹೀಗೆ ಹೋದ ಇಬ್ಬರು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕಟ್ಟೆಯೊಳಗೆ ಬಿದ್ದಿದ್ದಾರೆ. ಕೂಡಲೇ ಮಕ್ಕಳನ್ನ ಕಾಪಾಡಲು ಮಂಜುಳಾ ತಾನೂ ಕಟ್ಟೆಗೆ ಹಾರಿದ್ದಾರೆ.

ಇತ್ತ ಇದನ್ನು ಗಮನಿಸಿದ ಸ್ಥಳೀಯರು, ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Pragati TV Social Connect for more latest u

Leave a Reply

Your email address will not be published. Required fields are marked *