ತುಮಕೂರು!! ಟೈರ್ ಬ್ಲಾಸ್ಟ್, ಮದುವೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದವರು‌ ಮಸಣಕ್ಕೆ

ತುಮಕೂರು!! ಟೈರ್ ಬ್ಲಾಸ್ಟ್, ಮದುವೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದವರು ಮಸಣಕ್ಕೆ

ತುಮಕೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಭೀಕರ ರಸ್ತೆ ಅಪಘಾತದಲ್ಲಿ ಚಾಲಕನ ಸಾವನ್ನಪ್ಪಿದ್ದಾನೆ. ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ. ಮರಕ್ಕೆ ಗುದಿದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ‌.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33 ರಲ್ಲಿರುವ ರಾಜೇಂದ್ರ ಪುರ ಗೇಟ್ ಬಳಿ ಈ ಘಟನೆ ನಡೆದಿದೆ.

ಮಂಡ್ಯ ಮೂಲದ ನಾಲ್ವರು, ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ತೆರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದೆ. ಗಾಯಾಳುಗಳನ್ನ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮುಗಿಸಿ ಕಾರಿನಲ್ಲಿ ತೆರಳುತ್ತಿದ್ದ ಮಂಡ್ಯ ಪಟ್ಟಣದ ನಿವಾಸಿಗಳು ಈ ಅಪಘಾತಕ್ಕೆ ಈಡಾಗಿದ್ದಾರೆ. ಮಂಡ್ಯ ಪಟ್ಟಣದ ಚಾಮರಾಜನಗರದ ನಿವಾಸಿ ಆಕರ್ಶ್ (28), ಮೃತ ದುರ್ದೈವಿ. ಶಶಾಂಕ್ ಗೌಡ, ಜ್ಞಾನೇಶ್ವರಿ, ಶಶಾಂಕ್ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ಶಶಾಂಕ್ ಗೌಡ ಹಾಗೂ ಜ್ಞಾನೇಶ್ವರಿ ಮದುವೆಯಾಗಿ ಕೇವಲ ಮೂರು ತಿಂಗಳಾಗಿತ್ತು. ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯಕ್ಕೆ ತೆರಳುವಾಗ ಘಟನೆ ನಡೆದಿದೆ. ಮೃತದೇಹ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *