ಉತ್ತರಪ್ರದೇಶ || ಆ್ಯಂಬುಲೆನ್ಸ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ

ಸಾಂದರ್ಭಿಕ ಚಿತ್ರ

ಲಕ್ನೋ: ಆ್ಯಂಬುಲೆನ್ಸ್ ನಲ್ಲಿ ತನ್ನ ಪತಿಯೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಮತ್ತು ರೋಗಿಯಾಗಿದ್ದ ಆಕೆಯ ಪತಿಯನ್ನು ಆಕ್ಸಿಜನ್ ಸಿಲಿಂಡರ್ ತೆಗೆದು ಆ್ಯಂಬುಲೆನ್ಸ್ ನಿಂದ ಹೊರಗೆ ತಳ್ಳಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ಆಗಿದೆ

ಮಹಿಳೆಯೋರ್ವರು ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಪತಿ ಹರೀಶ್ ಅವರನ್ನು ಸಮೀಪದ ಬಸ್ತಿ ವೈದ್ಯಕೀಯ ಕಾಲೇಜಿಗೆ ಕರೆದುಕೊಂಡು ಹೋಗಿದ್ದರು. ಅವರ ಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಯ ವೈದ್ಯರು ಅವರನ್ನು ಬೇರೆ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಯ ಶುಲ್ಕ ಕಟ್ಟಲು ಸಾಧ್ಯವಿಲ್ಲ ಎಂದು ಮಹಿಳೆ ತನ್ನ ಪತಿಯನ್ನು ಮನೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲು ತೀರ್ಮಾನಿಸಿದ್ದಾರೆ.

ಕರೆದೊಯ್ಯಲು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆ್ಯಂಬುಲೆನ್ಸ್ ನಲ್ಲಿ ಚಾಲಕ ತನ್ನ ಬಳಿ ಕುಳಿತುಕೊಳ್ಳುವಂತೆ ಮಹಿಳೆಗೆ ಬಲವಂತ ಮಾಡಿದ್ದಾನೆ. ಬಳಿಕ ಸಹಾಯಕನ ಜೊತೆ ಸೇರಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಮಹಿಳೆ ವಿರೋಧಿಸಿದ್ದು, ದುಷ್ಕರ್ಮಿಗಳು ಮಹಿಳೆಯ ಅನಾರೋಗ್ಯ ಪೀಡಿತ ಪತಿಯ ಆಕ್ಸಿಜನ್ ಪೂರೈಕೆಯನ್ನು ನಿಲ್ಲಿಸಿ ಇಬ್ಬರನ್ನು ಕೂಡ ಆ್ಯಂಬುಲೆನ್ಸ್ ನಿಂದ ಹೊರಕ್ಕೆ ತಳ್ಳಿದ್ದಾರೆ ಎಂದು ತಿಳಿದು ಬಂದಿದೆ.

ಆ್ಯಂಬುಲೆನ್ಸ್ ಚಾಲಕ ತನ್ನ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ, ನನ್ನ ಪತಿಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿ ಹೊರಗೆ ತಳ್ಳಿದ ಬಳಿಕ ಅವರಿಗೆ ಗಂಭೀರವಾಗಿ ಗಾಯಗಳಾಗಿದೆ ಮತ್ತು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.

Leave a Reply

Your email address will not be published. Required fields are marked *