ವಾಲ್ಮೀಕಿ ಹಗರಣದ ವಿಚಾರಣೆ || ಸಿಬಿಐ ತನಿಖೆಗೆ ವಹಿಸಲು ಆದೇಶ ನೀಡಲಿರುವ ಕೋರ್ಟ್ ?

ಜಾಡಮಾಲಿ ಪದ ಬಳಸಬಾರದು : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯ ಆದೇಶ ಮಂಗಳವಾರ(ಇOದು) ಹೊರಬೀಳಲಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ತೀರ್ಪು ಕಾಯ್ದಿರಿಸಿದ್ದು, ಮಧ್ಯಾಹ್ನ 2.30ಕ್ಕೆ ಪ್ರಕಟಿಸಲಿದೆ.

ಈ ಪ್ರಕರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಾದ ಎಂದು ಅದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸಬೇಕೇ? ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕಿOಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 35 A ಅಡಿ ಹೊರಡಿಸಿರುವ ಮಾಸ್ಟರ್ ಸುತ್ತೋಲೆಯ ಪ್ರಕಾರ ನಿರ್ದಿಷ್ಟ ಮೊತ್ತದ ಹಣಕಾಸು ಅವ್ಯವಹಾರವನ್ನು ಸಿಬಿಐ ತನಿಖೆ ನಡೆಸಬೇಕೇ ಎಂಬ ವಿಚಾರಗಳಿಗೆ ಉತ್ತರಿಸುವ ಮೂಲಕ ಅರ್ಜಿಯ ಊರ್ಜಿತತ್ವ ನಿರ್ಧರಿಸಲಾಗುವುದು ಎಂದು ನ್ಯಾಯಪೀಠ ಹೇಳಿತ್ತು.

ಇಡೀ ಬ್ಯಾಂಕಿOಗ್ ವಲಯದ ಪ್ರಾಮಾಣಿಕತೆಯನ್ನು ಖಾತರಿಪಡಿಸಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪರ ವಕೀಲರು ವಾದಿಸಿದ್ದರು.

ಅರ್ಜಿಯ ಸಿಂಧುತ್ವದ ಬಗ್ಗೆ ಪ್ರಾಥಮಿಕ ಪ್ರಶ್ನೆ ಇದೆ. ಏಕೆಂದರೆ ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ವ್ಯಾಜ್ಯವಾಗಿದೆ. ಈ ಅರ್ಜಿಯ ಮೂಲವೇ ಕೇಂದ್ರ ಸರ್ಕಾರ ಹೊರಡಿಸಿರುವ ಒಂದು ಸುತ್ತೋಲೆ, ಅಂತಹ ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರ ಮತ್ತು ಪೊಲೀಸರ ನಡುವಿನ ಅಧಿಕಾರದಲ್ಲಿ ಮಧ್ಯಪ್ರವೇಶ ಮಾಡಲು ಯತ್ನಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

Leave a Reply

Your email address will not be published. Required fields are marked *