Dwarakish ನಿರ್ಮಾಣದ ಸಿನಿಮಾದಲ್ಲಿ ನಟಿಸಬೇಕಿತ್ತು Vishnu-Sridevi; ಸಿನಿಮಾ ನಿಂತಿದ್ದೇಕೆ..?

Dwarakish ನಿರ್ಮಾಣದ ಸಿನಿಮಾದಲ್ಲಿ ನಟಿಸಬೇಕಿತ್ತು Vishnu-Sridevi; ಸಿನಿಮಾ ನಿಂತಿದ್ದೇಕೆ..?

ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ ‘ಆಪ್ತಮಿತ್ರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಗುಂಗು ಹೋದ ಬಳಿಕವೇ ಮತ್ತೊಂದು ಸಿನಿಮಾ ಮಾಡಬೇಕು ಎಂಬುದು ದ್ವಾರಕೀಶ್ ನಿರ್ಧಾರ ಆಗಿತ್ತು. ಇಲ್ಲವಾದರೆ ಎಲ್ಲರೂ ಎರಡೂ ಚಿತ್ರಗಳ ಮಧ್ಯೆ ಹೋಲಿಕೆ ಮಾಡುತ್ತಾರೆ ಎಂಬ ಭಯ ಇತ್ತು. ಸಿನಿಮಾಗೆ ಟೈಟಲ್ ಕೂಡ ಫಿಕ್ಸ್ ಆಯಿತು. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ.

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ನಿರ್ಮಾಪಕರಾಗಿ ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದರು. ವಿಷ್ಣುವರ್ಧನ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಇಬ್ಬರೂ ಒಟ್ಟಾಗಿ ಮಾಡಿದ ಚಿತ್ರಗಳು ಹಲವು. ಅವರು ವಿಷ್ಣುವರ್ಧನ್ ಹಾಗೂ ಬಹುಭಾಷಾ ನಟಿ ಶ್ರೀದೇವಿಯನ್ನು ಒಟ್ಟಿಗೆ ತರೋ ಪ್ರಯತ್ನ ಮಾಡಿದ್ದರು. ಆದರೆ, ಅದು ಸಾಧ್ಯವಾಗಲೇ ಇಲ್ಲ. ಆ ಬಗ್ಗೆ ದ್ವಾರಕೀಶ್ ಮಗ ಯೋಗಿ ಮಾತನಾಡಿದ್ದಾರೆ.

ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಒಟ್ಟಾಗಿ ನಟಿಸಿದ ‘ಆಪ್ತಮಿತ್ರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಗುಂಗು ಹೋದ ಬಳಿಕವೇ ಮತ್ತೊಂದು ಸಿನಿಮಾ ಮಾಡಬೇಕು ಎಂಬುದು ದ್ವಾರಕೀಶ್ ನಿರ್ಧಾರ ಆಗಿತ್ತು. ಇಲ್ಲವಾದರೆ ಎಲ್ಲರೂ ಎರಡೂ ಚಿತ್ರಗಳ ಮಧ್ಯೆ ಹೋಲಿಕೆ ಮಾಡುತ್ತಾರೆ ಎಂಬ ಭಯ ಇತ್ತು. ಸಿನಿಮಾಗೆ ಟೈಟಲ್ ಕೂಡ ಫಿಕ್ಸ್ ಆಯಿತು. ಆದರೆ, ಸಿನಿಮಾ ಸೆಟ್ಟೇರಲೇ ಇಲ್ಲ.

‘ಜನರು ಆಪ್ತಮಿತ್ರ ಸಿನಿಮಾ ಮರೀಬೇಕಿತ್ತು. ಮರೀಬೇಕು ಎಂದರೆ ಸೂಪರ್ ಹಿಟ್ ಚಿತ್ರಗಳು ಬರಬೇಕು. ಆಗ ಜೋಗಿ, ದುನಿಯಾ, ಮುಂಗಾರುಮಳೆ ಹಿಟ್ ಬಂತು. 2008ರ ಕೊನೆಯಲ್ಲಿ ನಾವು ಸಿನಿಮಾ ಮಾಡಬೇಕು ಎಂದುಕೊಂಡೆವು. ಆಲದಮರ ಸಿನಿಮಾ ಟೈಟಲ್ ನೋದಂಣಿ ಮಾಡಿಸಿದೆವು. ಈ ಚಿತ್ರದಲ್ಲಿ ವಿಷ್ಣುವರ್ಧನ್, ಶ್ರೀದೇವಿ, ಅಪ್ಪಾಜಿ, ಪ್ರಕಾಶ್ ರಾಜ್ ನಟಿಸಬೇಕಿತ್ತು. ಈ ಸಿನಿಮಾಗೆ ಅಪ್ಪಾಜಿ ಅವರೇ ನಿರ್ದೇಶನ ಮಾಡಬೇಕಿತ್ತು’ ಎಂದು ಸಂದರ್ಶನದಲ್ಲಿ ಯೋಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *