ಬೆಂಗಳೂರು: ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ಬಾಲಣ್ಣ ಕುಟುಂಬದವರು ನೆಲಸಮ ಮಾಡಿರುವ ಘಟನೆ ರಾಜ್ಯದಾದ್ಯಂತ ಚರ್ಚೆ ಹುಟ್ಟುಹಾಕಿದೆ. ವಿಷ್ಣುವರ್ಧನ್ ಅಭಿಮಾನಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಸಿನಿಮಾ ಸೆಲೆಬ್ರಿಟಿಗಳು ಸಹ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದೀಗ ‘ರಿಪ್ಪನ್ ಸ್ವಾಮಿ’ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದ ನಟ ವಿಜಯ್ ರಾಘವೇಂದ್ರ ಸಹ ಈ ವಿಷಾದನೀಯ ಘಟನೆ ಬಗ್ಗೆ ಮಾತನಾಡಿದ್ದು, ಅಂಥಹಾ ಒಬ್ಬ ದೊಡ್ಡ ವ್ಯಕ್ತಿಗೆ ಹೀಗಾಗಿದ್ದು ದುಃಖಕರ ಎಂದಿದ್ದಾರೆ.
For More Updates Join our WhatsApp Group :




