ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ RSS ಚಟುವಟಿಕೆಗಳು, ಅವರದೇ ಪಕ್ಷದ ಶಾಸಕರ ಶಾಲೆಯಲ್ಲಿ ನಡೆದದ್ದು ಯಾವರೀತಿ?

ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ RSS ಚಟುವಟಿಕೆಗಳು, ಅವರದೇ ಪಕ್ಷದ ಶಾಸಕರ ಶಾಲೆಯಲ್ಲಿ ನಡೆದದ್ದು ಯಾವರೀತಿ?

ಕಲಬುರಗಿ: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಆರ್​ಎಸ್​ಎಸ್ ಅನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ, ಅವರದೇ ತವರು ಜಿಲ್ಲೆ ಕಲಬುರಗಿಯಲ್ಲಿ, ಅವರದೇ ಪಕ್ಷದ ಶಾಸಕ ಎಂವೈ ಪಾಟೀಲ್ ಒಡೆತನದ ಶಾಲೆಯಲ್ಲಿ ಭಾನುವಾರ ಸಂಜೆ ಆರ್​ಎಸ್​ಎಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲದೆ, ಶಾಲೆಯ ಆವರಣದಲ್ಲಿ ಆರ್​ಎಸ್​ಎಸ್ ಪಥಸಂಚಲನ ಕೂಡ ನಡೆದಿದೆ. ಅಫಜಲಪುರ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ನಡೆದಿದೆ.

ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​​ಎಸ್​​ಎಸ್ ಪಥಸಂಚಲನ ನಡೆಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಾಲೆ ಸಾರ್ವಜನಿಕರ ಸ್ವತ್ತು. ಇಲ್ಲಿಯವರೆಗೆ ಎಲ್ಲಾ ಪಕ್ಷದವರಿಗೆ ಕಾರ್ಯಕ್ರಮ ಮಾಡಿಕೊಡಲು ಜಾಗ ಕೊಟ್ಟಿದ್ದೇವೆ. ನಮ್ಮದು ದ್ರಾವಿಡ, ಬುಡಕಟ್ಟು ಮನಸ್ಥಿತಿ. ಆದರೆ, ಆರ್​​ಎಸ್​ಎಸ್ ಅವರನ್ನು ಆರ್ಯ ಸಮಾಜ ಪರಿಕಲ್ಪನೆ ಇದೆ. ಆರ್​​ಎಸ್​ಎಸ್ ಮೂಲ ಉದ್ದೇಶವೇ ಬೇರೆ. ಅವರು ನಡೆದುಕೊಳ್ಳುತ್ತಿರುವ ರೀತಿಯೇ ಬೇರೆ ಎಂದರು.

ಆರ್​​ಎಸ್​ಎಸ್ ನಿಷೇಧ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಆರ್​​ಎಸ್​ಎಸ್ ಚಟುವಟಿಕೆ ನಿಷೇಧ ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಪ್ರತಿಕ್ರಿಯಿಸಿದ್ದು, ಅದಕ್ಕೆ ಯಾವುದೇ ಆಕ್ಷೇಪವಿಲ್ಲ. ಆರ್​​ಎಸ್​ಎಸ್ ಸಂಘಟನೆ ಉದ್ದೇಶ ಸರಿಯಲ್ಲ. ಅವರಲ್ಲೂ ಸ್ವಾತಂತ್ರ್ಯಕ್ಕೆ ಬಲಿಯಾದವರು ಒಬ್ಬರೋ ಇಬ್ಬರೋ ಇರಬಹುದು. ಆರ್​​ಎಸ್​​ಎಸ್​​ನವರು ಲಾಠಿ ಬಿಟ್ಟು ತಿರಂಗಾ ಬಾವುಟ ಹಿಡಿಯಲಿ. ಅವರು ತಿರಂಗಾ ಬಾವುಟ ಹಿಡಿದ್ರೆ ನಾವು ಸ್ವಾಗತ ಮಾಡುತ್ತೇವೆ. ಅದು ಬಿಟ್ಟು ಲಾಠಿ ಹಿಡಿದು ಪಥಸಂಚಲನ ಮಾಡಿದರೆ ಖಂಡಿಸುತ್ತೇವೆ ಎಂದಿದ್ದಾರೆ.

ಆರ್​​ಎಸ್​ಎಸ್ ಯಾಕೆ ಕೇಂದ್ರ ಕಚೇರಿ ಮೇಲೆ ತಿರಂಗಾ ಬಾವುಟ ಹಾರಿಸಲ್ಲ? ಅದು ದೇಶ ಕಟ್ಟುವ ಸಂಘಟನೆ ಅಲ್ಲ, ಬದಲಾಗಿ ದೇಶ ಒಡೆಯುವ ಸಂಘಟನೆ ಎಂದು ಎಂವೈ ಪಾಟೀಲ್ ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಘದ ಪಥಸಂಚಲನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಂಘಟದ ಚಟುವಟಿಕೆಗಳ ನಿಷೇಧಕ್ಕೆ ಮನವಿ ಮಾಡಿದ್ದಾರೆ. ಆದರೆ, ಅದೇ ಸಮಯದಲ್ಲಿ ಅವರದೇ ಪಕ್ಷದ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರ್​​ಎಸ್​ಎಸ್ ಕಾರ್ಯಕ್ರಮ ನಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *