ಹಾಸನ: ಹಾಸನಾಂಬೆ ದರ್ಶನಕ್ಕೆಂದು ಬರುವಾಗ ತಮ್ಮ ಕಾರನ್ನು ತಡೆದ ಅಧಿಕಾರಿಗಳ ವಿರುದ್ಧ ಶಾಸಕ ಹೆಚ್.ಡಿ.ರೇವಣ್ಣ ಗರಂ ಆದ ಪ್ರಸಂಗ ನಡೆದಿದೆ. ತಮ್ಮ ಭದ್ರತಾ ವ್ಯವಸ್ಥೆಯೊಂದಿಗೆ ಶಿಷ್ಟಾಚಾರ ಪಾಲನೆ ಅಧಿಕಾರಿಗಳಿಗೆ ತಿಳಿಸದೆ ಹಾಸನಾಂಬೆ ದರ್ಶನಕ್ಕೆ ರೇವಣ್ಣ ಆಗಮಿಸಿದ್ದರು. ಹೀಗಾಗಿ ಅವರ ಕಾರನ್ನು ಕಂದಾಯ ಇಲಾಖೆ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಗರಂ ಆದ ಶಾಸಕರು, ಬಳಿಕ ಕಾರಿನಿಂದ ಇಳಿದು ನಡೆದುಕೊಂಡು ದರ್ಶನಕ್ಕೆ ತೆರಳಿದ್ದಾರೆ. ಹೆಚ್.ಡಿ.ರೇವಣ್ಣ, ಪತ್ನಿ ಭವಾನಿಗೆ ಸಿಬ್ಬಂದಿ ನೇರ ಎಂಟ್ರಿ ಕೊಟ್ಟಿದ್ದಾರೆ.
For More Updates Join our WhatsApp Group :
