ಕಾಡಾನೆ ದಾಳಿಯಲ್ಲಿದ್ದ ಪ್ರದೇಶಕ್ಕೆ ಕಾಡುಕೋಣಗಳ ದಾಳಿ ಕಂಗಾಲು ತಂದಿದೆ
ಚಿಕ್ಕಮಗಳೂರು : ಈಗಾಗಲೇ ಕಾಡಾನೆಗಳ ದಾಳಿಯಿಂದ ಆತಂಕದಲ್ಲಿರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಇದೀಗ ಕಾಡುಕೋಣಗಳ ಹಾವಳಿಯೂ ತಲೆನೋವಾಗಿ ಪರಿಣಮಿಸಿದೆ. ಕೊಪ್ಪ ತಾಲೂಕಿನ ಬಸ್ರೀಕಟ್ಟೆ ಗ್ರಾಮದ ಕಾಫಿತೋಟದಲ್ಲಿ 50ಕ್ಕೂ ಅಧಿಕ ಕಾಡುಕೋಣಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳೀಯರು ಕಂಗಾಲಾಗಿದ್ದಾರೆ. ಕಾಫಿತೋಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಾಡುಕೋಣಗಳು ಸಂಚರಿಸುತ್ತಿರುವ ದೃಶ್ಯ ಕಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ಕಾಡಾನೆಗಳ ಹಾವಳಿ ಇನ್ನೂ ಕಡಿಮೆಯಾಗದಿರುವಾಗಲೇ ಕಾಡುಕೋಣಗಳ ದಾಳಿ ಭೀತಿ ಹೆಚ್ಚಾಗಿದೆ.
ಇತ್ತೀಚೆಗೆ ಕೊಪ್ಪ ತಾಲೂಕಿನ ಮುಂಡೋಳು ಗ್ರಾಮದಲ್ಲಿ 55 ವರ್ಷದ ರೈತ ಶಿವಪ್ಪ ಮೇಲೆ ಕಾಡುಕೋಣ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡ ಶಿವಪ್ಪ ಅವರನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆ ಕೊಪ್ಪ ಅರಣ್ಯ ವಲಯದ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಡುಕೋಣಗಳ ಹಿಂಡು ಗ್ರಾಮಾಂತರ ಪ್ರದೇಶಗಳಲ್ಲಿ ನಿರಂತರ ಸಂಚರಿಸುತ್ತಿದೆ. ಇದರಿಂದ ಕಾಫಿತೋಟ ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
For More Updates Join our WhatsApp Group :




