ತುಮಕೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ.
ತುಮಕೂರು: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು, ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್ ತನಿಖೆ ವೇಳೆ ಬಯಲಾಗಿದ್ದು, ಗಂಡನನ್ನು ಕಳೆದುಕೊಂಡಿದ್ದ ಮೃತ ಮಹಿಳೆಗೆ ಮಕ್ಕಳೂ ಇರಲಿಲ್ಲ ಎನ್ನಲಾಗಿದೆ.
ಇನ್ನು ಜಯಲಕ್ಷ್ಮೀ ಸಾವಿನ ಬಗ್ಗೆ ಅನುಮಾನಗೊಂಡ ಶ್ರೀನಿವಾಸ್ ಎಂಬಾತ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು, ಅಂತ್ಯಕ್ರಿಯೆಗೆ ಸಿದ್ಧಗೊಂಡಿದ್ದ ಶವವನ್ನು ಮರಣೊತ್ತರ ಪರಿಕ್ಷೆಗೆ ರವಾನೆ ಮಾಡಿದ್ದಾರೆ. ಬಳಿಕ ಆಕೆಯ ಜೊತೆ ವಾಸವಿದ್ದ ಸಾಕು ಮಗ ಚಂದ್ರಶೇಖರ್ ಹಾಗೂ ತಂಗಿ ಅನುಸೂಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇವರೇ ತಡರಾತ್ರಿ ಜಯಲಕ್ಷ್ಮೀ ಉಸಿರುಗಟ್ಟಿಸಿ ಕೊಂದಿರೊದು ಬೆಳಿಕಿಗೆ ಬಂದಿದೆ.
ಜಯಲಕ್ಷ್ಮೀ ಸಾವಿನ ಬಗ್ಗೆ ಅನುಮಾನಗೊಂಡು ದೂರು ನೀಡಿದ್ದ ಶ್ರೀನಿವಾಸ್ ಅಸಲಿಗೆ ಆಕೆಯ ಗೆಳಯ ಎಂಬುದು ಗೊತ್ತಾಗಿದೆ. ಪೊಲೀಸ್ ಮಾಹಿತಿ ಪ್ರಕಾರ ಗಂಡನ ಕಳೆದುಕೊಂಡಿದ್ದ ಜಯಲಕ್ಷ್ಮೀಗೆ ಕಳೆದ 20 ವರ್ಷಗಳ ಹಿಂದೆ ಶ್ರೀನಿವಾಸ್ ಪರಿಯವಾಗಿತ್ತು. ಆ ಬಳಿಕ ಇಬ್ಬರಲ್ಲೂ ಆತ್ಮೀಯತೆ ಹೆಚ್ಚಾಗಿ ಒಟ್ಟಿಗೆ ಸಂಸಾರ ಮಾಡುತಿದ್ದರು. ಇದರ ನಡುವೆ ಮಕ್ಕಳಿಲ್ಲದ ಕಾರಣಕ್ಕೆ ಈಕೆ ತನ್ನ ಸಹೋದರಿ ಅನುಸೂಯಾ ಮಗ ಚಂದ್ರಶೇಖರ್ನ ದತ್ತು ಪಡೆದುಕೊಂಡು ಸಾಕಿಕೊಂಡಿದ್ದಳು.
For More Updates Join our WhatsApp Group :




