ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ.

ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ.

ಮಂಡ್ಯ: ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ʼಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ” ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

16 ರಿಂದ 18  ತಾಸು ರಸ್ತೆಯಲ್ಲಿ ಸಂಚರಿಸಿ ಜೀವ ಪಣಕ್ಕಿಟ್ಟು ಸ್ವಿಗ್ಗಿ, ಜ್ಯೊಮೋಟೊ ಪ್ಲಾಟ್‌ ಫಾರಂಗಳಲ್ಲಿ  ಕೆಲಸ ಮಾಡುತ್ತಿರುವ ಯುವಕರಿಗೆ ಹಾಗೂ ಕಾರ್ಮಿಕರಿಗೆ ಅಪಘಾತ ವಿಮೆ ನೀಡಲು ನೂತನ ಯೋಜನೆ ಜಾರಿಗೆ ತರಲಾಗಿದೆ. ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಪರಿಹಾರ, ಅಂಗವೈಫಲ್ಯತೆಯಾದರೆ ರೂ. 2 ಲಕ್ಷ ಪರಿಹಾರ ಹಾಗೂ ಗರಿಷ್ಠ 1 ಲಕ್ಷದಷ್ಟು ಆಸ್ಪತ್ರೆಗೆ ತಗಲುವ ವೆಚ್ಚವನ್ನು ಭರಿಸಲಾಗುವುದು ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *