ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ವರದಕ್ಷಿಣ ಹಿಂಸೆಗೆ ಯುವತಿ ಬ* – ಪೋಷಕರು ಗಂಭೀರ ಆರೋಪ

ಶಿವಮೊಗ್ಗ: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಎನ್.ಆರ್.ಪುರ ಮೂಲದ ಗೃಹಿಣಿ ಮೃತಪಟ್ಟಿದ್ದು, ಪತಿ ಮನೆಯವರೇ ಕೀಟನಾಶಕ ಕೊಟ್ಟು ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಚಿಕಿತ್ಸೆ ಫಲಿಸದೆ ಗೃಹಿಣಿ ಪೂಜಾ(30) ಇಹಲೋಕ ತ್ಯಜಿಸಿದ್ದು, ಇವರಿಗೆ ಎನ್.ಆರ್.ಪುರ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ನಿವಾಸಿ ಶರತ್​ ಎಂಬವರ ಜೊತೆ 3 ವರ್ಷದ ಹಿಂದೆ ವಿವಾಹವಾಗಿತ್ತು. ಶರತ್​-ಪೂಜಾ ದಂಪತಿಗೆ ಎರಡು ವರ್ಷದ ಗಂಡು ಮಗುವೂ ಇದ್ದು, ವರದಕ್ಷಿಣಿಗಾಗಿ ಪೂಜಾ ಮೇಲೆ ಹಲ್ಲೆ ನಡೆಸಲಾಗುತ್ತಿತ್ತು.

ಪತಿ ಶರತ್, ಮಾವ ಸುಧಾಕರ್​​, ಅತ್ತೆ ರಾಧಾ ಹಾಗೂ ಶರತ್​​​​ ಸಹೋದರಿ ಶಬರಿ ಹಿಂಸೆ ನೀಡುತ್ತಿದ್ದ ಬಗ್ಗೆ ಮಗಳು ಹೇಳಿಕೊಂಡಿದ್ದಳು ಎಂದು ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೂಜಾ ಪತಿ ಶರತ್ ಹಾಗೂ ಮಾವ ಸುಧಾಕರ್​​ರನ್ನ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *